ಸಂಪರ್ಕ ರಸ್ತೆಯ ಹೆಸರಿನಲ್ಲಿ ನಿಖರ ಬೆಲೆ ನಿಗದಿ ಮಾಡದೇ ಫಲವತ್ತಾದ ಭೂಮಿ ಕಬಳಿಸುವ ಯತ್ನ- ರೈತ ಮುಖಂಡ ಆನಂದ್ ಮೂರ್ತಿ

ಸರ್ಕಾರಿ ಅಧಿಕಾರಿಗಳು ನಮ್ಮ ಭೂಮಿಗೆ ಸರಿಯಾದ ಬೆಲೆ ಘೋಷಣೆ ಮಾಡದೆ ಫಲವತ್ತಾದ ನಮ್ಮ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದಾರೆ, ಸಂಪರ್ಕ ರಸ್ತೆಯ ಹೆಸರಿನಲ್ಲಿ ಮೋಸ ನಡೆಯುತ್ತಿದೆ. ನಮ್ಮ ಭೂಮಿಗೆ ಸರಿಯಾದ ಬೆಲೆ ನೀಡಲು ಮನಸಿಲ್ಲದ ಅಧಿಕಾರಿಗಳು ಹಲವಾರು ಕಾರಣಗಳನ್ನು ಹೇಳಿ ಪಲಾಯನ ಮಾಡುತ್ತಿದ್ದಾರೆ. ರೈತರ ಗೋಳನ್ನು ಕೇಳುವವರಿಲ್ಲ ಎಂದು ರೈತ ಮುಖಂಡರಾದ ಆನಂದ್ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ, ಬೀರಸಂದ್ರ, ಬೈರದೆನಹಳ್ಳಿ, ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮಗಳಲ್ಲಿ 118-37ಗುಂಟೆ ವಿಸ್ತೀರ್ಣದ ಜಮೀನನ್ನು ಕೆ. ಐ. ಎ. ಡಿ. ಬಿ. ಕಾಯ್ದೆ ಅನ್ವಯ ಪರಿಹಾರ ನಿಗದಿಪಡಿಸಲು ನೆವಂಬರ್ 29 ರಂದು ನಡೆದ ಸಭೆಯ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಪರ ಇರಬೇಕಾದ ಅಧಿಕಾರಿಗಳು ರೈತರ ವಿರುದ್ಧ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಶೋಚನೀಯ ಸಂಗತಿ. ಸರಿಯಾದ ಬೆಲೆ ನೀಡದೇ ನಮ್ಮ ಭೂಮಿಯನ್ನು ಮಾರಾಟ ಮಾಡುವುದಿಲ್ಲ ಎಂದರು . ಸಾಕಷ್ಟು ಬಾರಿ ಬೆಂಗಳೂರು ಕೆ ಐ ಎ ಡಿ ಬಿ ಕಚೇರಿಗೆ ದಾಖಲೆಗಳೊಂದಿಗೆ ಪರಿಹಾರದ ಹಣವನ್ನು ಪಡೆಯಲು ಮನವಿ ಮಾಡಿಕೊಂಡಿದ್ದರೂ ಸಹ ಅಧಿಕಾರಿಗಳ ವಿಳಂಬ ಧೋರಣೆ ತೋರುತ್ತಿದ್ದಾರೆ. ರೈತರಿಗಾಗುತ್ತಿರುವ ನಷ್ಟದ ಬಗ್ಗೆ ಯೋಚಿಸದ ಅಧಿಕಾರಿಗಳು ರೈತರಿಗೆ ಇಲ್ಲ ಸಲ್ಲದ ದಾಖಲೆಗಳನ್ನು ತೆಗೆದುಕೊಂಡು ಬರುವಂತೆ ಕೇಳುತ್ತಿದ್ದಾರೆ. ಭೂ ಸ್ವಾಧೀನಕ್ಕೆ ಒಳಪಟ್ಟ ಜಾಮೀನುಗಳ ಮಾರುಕಟ್ಟೆ ಹೊರತುಪಡಿಸಿ ವಾಣಿಜ್ಯೇತರ ಉದ್ದೇಶಕ್ಕಾಗಿ ಒಂದು ಗುಂಟೆ ಜಮೀನು 30 ರಿಂದ 40 ಲಕ್ಷದ ವರೆಗೂ ಸಹ ಮಾರಾಟವಾಗುತ್ತಿದ್ದು ಸದರಿ ಗ್ರಾಮಗಳ ಜಮೀನಿಗೆ ಸರಿಯಾದ ಬೆಲೆ ನೀಡಬೇಕೆಂದು ಮನವಿ ಮಾಡಿದರು .

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನಾಗರಾಜು, ಮಂಜುನಾಥ್, ನರಸಪ್ಪ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago