ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ರಾಜ್ಯದಾದ್ಯಂತ ಲೋಕಾರ್ಪಣೆ

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.14ರ ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಹಿನ್ನೆಲೆ ಬಡ ಜನತೆಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ಮಹತ್ವದ ಯೋಜನೆ ‘ನಮ್ಮ ಕ್ಲಿನಿಕ್’ ದೊಡ್ಡಬಳ್ಳಾಪುರ ನಗರದಲ್ಲೂ ಉದ್ಘಾಟನೆಗೆ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಚಿವ ಎಂಟಿಬಿ ನಾಗರಾಜ್ , ಶಾಸಕ ವೆಂಕಟರಮಣಯ್ಯ, ಲೋಕ ಸಭಾ ಸದಸ್ಯರಾದ ಬಿಎನ್ ಬಚ್ಚೇಗೌಡ ಉಪಸ್ಥಿತರಿರಲಿದ್ದಾರೆ.

ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಪರಮೇಶ್ವರ ಮಾಹಿತಿ ನೀಡಿದ್ದೂ, ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು ಮತ್ತು ತಾಲ್ಲೂಕಿನ ಜನತೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದ ಯೋಜನೆ ಸದುಪಯೋಗ ಪಡಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್ ಮಾಹಿತಿ:

ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರಂದು 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯನಿರ್ವಹಿಸಲಿವೆ.

ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟೆ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago