ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.14ರ ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಹಿನ್ನೆಲೆ ಬಡ ಜನತೆಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ಮಹತ್ವದ ಯೋಜನೆ ‘ನಮ್ಮ ಕ್ಲಿನಿಕ್’ ದೊಡ್ಡಬಳ್ಳಾಪುರ ನಗರದಲ್ಲೂ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಚಿವ ಎಂಟಿಬಿ ನಾಗರಾಜ್ , ಶಾಸಕ ವೆಂಕಟರಮಣಯ್ಯ, ಲೋಕ ಸಭಾ ಸದಸ್ಯರಾದ ಬಿಎನ್ ಬಚ್ಚೇಗೌಡ ಉಪಸ್ಥಿತರಿರಲಿದ್ದಾರೆ.
ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಪರಮೇಶ್ವರ ಮಾಹಿತಿ ನೀಡಿದ್ದೂ, ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು ಮತ್ತು ತಾಲ್ಲೂಕಿನ ಜನತೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದ ಯೋಜನೆ ಸದುಪಯೋಗ ಪಡಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್ ಮಾಹಿತಿ:
ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರಂದು 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯನಿರ್ವಹಿಸಲಿವೆ.
ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟೆ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…