ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.14ರ ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಹಿನ್ನೆಲೆ ಬಡ ಜನತೆಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ಮಹತ್ವದ ಯೋಜನೆ ‘ನಮ್ಮ ಕ್ಲಿನಿಕ್’ ದೊಡ್ಡಬಳ್ಳಾಪುರ ನಗರದಲ್ಲೂ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಚಿವ ಎಂಟಿಬಿ ನಾಗರಾಜ್ , ಶಾಸಕ ವೆಂಕಟರಮಣಯ್ಯ, ಲೋಕ ಸಭಾ ಸದಸ್ಯರಾದ ಬಿಎನ್ ಬಚ್ಚೇಗೌಡ ಉಪಸ್ಥಿತರಿರಲಿದ್ದಾರೆ.
ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಪರಮೇಶ್ವರ ಮಾಹಿತಿ ನೀಡಿದ್ದೂ, ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು ಮತ್ತು ತಾಲ್ಲೂಕಿನ ಜನತೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದ ಯೋಜನೆ ಸದುಪಯೋಗ ಪಡಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್ ಮಾಹಿತಿ:
ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರಂದು 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯನಿರ್ವಹಿಸಲಿವೆ.
ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟೆ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…