ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ರಾಜ್ಯದಾದ್ಯಂತ ಲೋಕಾರ್ಪಣೆ

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.14ರ ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಹಿನ್ನೆಲೆ ಬಡ ಜನತೆಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ಮಹತ್ವದ ಯೋಜನೆ ‘ನಮ್ಮ ಕ್ಲಿನಿಕ್’ ದೊಡ್ಡಬಳ್ಳಾಪುರ ನಗರದಲ್ಲೂ ಉದ್ಘಾಟನೆಗೆ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಚಿವ ಎಂಟಿಬಿ ನಾಗರಾಜ್ , ಶಾಸಕ ವೆಂಕಟರಮಣಯ್ಯ, ಲೋಕ ಸಭಾ ಸದಸ್ಯರಾದ ಬಿಎನ್ ಬಚ್ಚೇಗೌಡ ಉಪಸ್ಥಿತರಿರಲಿದ್ದಾರೆ.

ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಪರಮೇಶ್ವರ ಮಾಹಿತಿ ನೀಡಿದ್ದೂ, ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು ಮತ್ತು ತಾಲ್ಲೂಕಿನ ಜನತೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದ ಯೋಜನೆ ಸದುಪಯೋಗ ಪಡಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್ ಮಾಹಿತಿ:

ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರಂದು 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯನಿರ್ವಹಿಸಲಿವೆ.

ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟೆ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

35 minutes ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

54 minutes ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

2 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

5 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

15 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago