ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ರಾಜ್ಯದಾದ್ಯಂತ ಲೋಕಾರ್ಪಣೆ

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.14ರ ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಹಿನ್ನೆಲೆ ಬಡ ಜನತೆಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ಮಹತ್ವದ ಯೋಜನೆ ‘ನಮ್ಮ ಕ್ಲಿನಿಕ್’ ದೊಡ್ಡಬಳ್ಳಾಪುರ ನಗರದಲ್ಲೂ ಉದ್ಘಾಟನೆಗೆ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಚಿವ ಎಂಟಿಬಿ ನಾಗರಾಜ್ , ಶಾಸಕ ವೆಂಕಟರಮಣಯ್ಯ, ಲೋಕ ಸಭಾ ಸದಸ್ಯರಾದ ಬಿಎನ್ ಬಚ್ಚೇಗೌಡ ಉಪಸ್ಥಿತರಿರಲಿದ್ದಾರೆ.

ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಪರಮೇಶ್ವರ ಮಾಹಿತಿ ನೀಡಿದ್ದೂ, ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು ಮತ್ತು ತಾಲ್ಲೂಕಿನ ಜನತೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದ ಯೋಜನೆ ಸದುಪಯೋಗ ಪಡಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್ ಮಾಹಿತಿ:

ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರಂದು 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯನಿರ್ವಹಿಸಲಿವೆ.

ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟೆ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

9 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

22 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago