ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ಫ್ಯಾಕ್ಟರಿ ಮುಂದೆ ಸಂಬಳಕ್ಕಾಗಿ ಕರವೇ ನಾರಾಯಣಗೌಡ ಬಣದಿಂದ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್ ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು..
ಶರ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅಂದರೆ, ಶೇ.70ರಷ್ಟು ಮಹಿಳಾ ಕಾರ್ಮಿಕರು, ಶೇ.30ರಷ್ಟು ಪುರುಷ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡುತ್ತಿಲ್ಲವೆಂದು ಕಾರ್ಮಿಕರು ಆರೋಪಿಸಿ ಫ್ಯಾಕ್ಟರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.. ಸದ್ಯ 15 ದಿನದಿಂದ ಫ್ಯಾಕ್ಟರಿಗೆ ಬೀಗ ಹಾಕಲಾಗಿದೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್, ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಮಾಲೀಕ ಹಾಗೂ ಆಡಳಿತ ಮಂಡಳಿ ಕಾರ್ಮಿಕರಿಂದ ಹಗಲಿರುಳು ದುಡಿಸಿಕೊಂಡು ಸಂಬಳ ನೀಡದೇ ಇದೀಗ ಫ್ಯಾಕ್ಟರಿಗೆ ಬೀಗ ಹಾಕಿಕೊಂಡು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಇದಕ್ಕೆ ಸಂಬಂಧಪಟ್ಟವರಿಗೆ ಕರೆ ಮಾಡಿದರೆ ಫೋನ್ ತೆಗೆಯುತ್ತಿಲ್ಲ. ಸಂಬಳವಿಲ್ಲದೇ ಈ ಬಡ ಕೂಲಿ ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ಕಾರ್ಮಿಕರಿಗೆ ಸಂಬಳವನ್ನು ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು…
ಮಹಿಳಾ ಕಾರ್ಮಿಕರಾದ ಶಿಲ್ಪಾ ಮಾತನಾಡಿ, ನಾವು ಈ ಕಂಪನಿಯಲ್ಲಿ ಹಗಲಿರುಳು ದುಡಿದಿದ್ದೇವೆ. ಸಂಬಳವನ್ನೇ ನಂಬಿ ಜೀವನ ನಡೆಸುತ್ತಿದ್ದೇವೆ. ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡಿಲ್ಲ. ಸಂಬಳ ಇಲ್ಲದ ಕಾರಣ ಆಚೆಗಡೆ ಸಾಲ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಇದೀಗ ಸಾಲಗಾರರು ಮನೆ ಬಳಿ ಬರುತ್ತಿದ್ದಾರೆ. ಕಂಪನಿಯವರು ಸಂಬಳ ನೀಡದೆ ನಮ್ಮ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನಮಗೆ ನಾವು ದುಡಿದ ಸಂಬಳ ಕೊಡಬೇಕು ಎಂದು ಆಗ್ರಹಿಸಿದರು..
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…