ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ಫ್ಯಾಕ್ಟರಿ ಮುಂದೆ ಸಂಬಳಕ್ಕಾಗಿ ಕರವೇ ನಾರಾಯಣಗೌಡ ಬಣದಿಂದ‌ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್ ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು..

ಶರ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅಂದರೆ, ಶೇ.70ರಷ್ಟು ಮಹಿಳಾ ಕಾರ್ಮಿಕರು, ಶೇ.30ರಷ್ಟು ಪುರುಷ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡುತ್ತಿಲ್ಲವೆಂದು  ಕಾರ್ಮಿಕರು ಆರೋಪಿಸಿ ಫ್ಯಾಕ್ಟರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.. ಸದ್ಯ 15 ದಿನದಿಂದ ಫ್ಯಾಕ್ಟರಿಗೆ ಬೀಗ ಹಾಕಲಾಗಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್, ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಮಾಲೀಕ ಹಾಗೂ ಆಡಳಿತ ಮಂಡಳಿ ಕಾರ್ಮಿಕರಿಂದ ಹಗಲಿರುಳು ದುಡಿಸಿಕೊಂಡು ಸಂಬಳ ನೀಡದೇ ಇದೀಗ ಫ್ಯಾಕ್ಟರಿಗೆ ಬೀಗ ಹಾಕಿಕೊಂಡು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಸಂಬಂಧಪಟ್ಟವರಿಗೆ ಕರೆ ಮಾಡಿದರೆ ಫೋನ್ ತೆಗೆಯುತ್ತಿಲ್ಲ. ಸಂಬಳವಿಲ್ಲದೇ ಈ ಬಡ ಕೂಲಿ ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ಕಾರ್ಮಿಕರಿಗೆ ಸಂಬಳವನ್ನು ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು…

ಮಹಿಳಾ ಕಾರ್ಮಿಕರಾದ ಶಿಲ್ಪಾ ಮಾತನಾಡಿ, ನಾವು ಈ ಕಂಪನಿಯಲ್ಲಿ ಹಗಲಿರುಳು ದುಡಿದಿದ್ದೇವೆ. ಸಂಬಳವನ್ನೇ ನಂಬಿ ಜೀವನ ನಡೆಸುತ್ತಿದ್ದೇವೆ. ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡಿಲ್ಲ. ಸಂಬಳ ಇಲ್ಲದ ಕಾರಣ ಆಚೆಗಡೆ ಸಾಲ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಇದೀಗ ಸಾಲಗಾರರು ಮನೆ ಬಳಿ ಬರುತ್ತಿದ್ದಾರೆ. ಕಂಪನಿಯವರು ಸಂಬಳ ನೀಡದೆ ನಮ್ಮ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನಮಗೆ ನಾವು ದುಡಿದ ಸಂಬಳ ಕೊಡಬೇಕು ಎಂದು ಆಗ್ರಹಿಸಿದರು..

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

10 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

20 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

23 hours ago

Instant Play Casino

Instant play casinos allow you to play casino games online without installing any software. These…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago