ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ಫ್ಯಾಕ್ಟರಿ ಮುಂದೆ ಸಂಬಳಕ್ಕಾಗಿ ಕರವೇ ನಾರಾಯಣಗೌಡ ಬಣದಿಂದ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್ ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು..
ಶರ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅಂದರೆ, ಶೇ.70ರಷ್ಟು ಮಹಿಳಾ ಕಾರ್ಮಿಕರು, ಶೇ.30ರಷ್ಟು ಪುರುಷ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡುತ್ತಿಲ್ಲವೆಂದು ಕಾರ್ಮಿಕರು ಆರೋಪಿಸಿ ಫ್ಯಾಕ್ಟರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.. ಸದ್ಯ 15 ದಿನದಿಂದ ಫ್ಯಾಕ್ಟರಿಗೆ ಬೀಗ ಹಾಕಲಾಗಿದೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್, ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಮಾಲೀಕ ಹಾಗೂ ಆಡಳಿತ ಮಂಡಳಿ ಕಾರ್ಮಿಕರಿಂದ ಹಗಲಿರುಳು ದುಡಿಸಿಕೊಂಡು ಸಂಬಳ ನೀಡದೇ ಇದೀಗ ಫ್ಯಾಕ್ಟರಿಗೆ ಬೀಗ ಹಾಕಿಕೊಂಡು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಇದಕ್ಕೆ ಸಂಬಂಧಪಟ್ಟವರಿಗೆ ಕರೆ ಮಾಡಿದರೆ ಫೋನ್ ತೆಗೆಯುತ್ತಿಲ್ಲ. ಸಂಬಳವಿಲ್ಲದೇ ಈ ಬಡ ಕೂಲಿ ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ಕಾರ್ಮಿಕರಿಗೆ ಸಂಬಳವನ್ನು ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು…
ಮಹಿಳಾ ಕಾರ್ಮಿಕರಾದ ಶಿಲ್ಪಾ ಮಾತನಾಡಿ, ನಾವು ಈ ಕಂಪನಿಯಲ್ಲಿ ಹಗಲಿರುಳು ದುಡಿದಿದ್ದೇವೆ. ಸಂಬಳವನ್ನೇ ನಂಬಿ ಜೀವನ ನಡೆಸುತ್ತಿದ್ದೇವೆ. ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡಿಲ್ಲ. ಸಂಬಳ ಇಲ್ಲದ ಕಾರಣ ಆಚೆಗಡೆ ಸಾಲ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಇದೀಗ ಸಾಲಗಾರರು ಮನೆ ಬಳಿ ಬರುತ್ತಿದ್ದಾರೆ. ಕಂಪನಿಯವರು ಸಂಬಳ ನೀಡದೆ ನಮ್ಮ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನಮಗೆ ನಾವು ದುಡಿದ ಸಂಬಳ ಕೊಡಬೇಕು ಎಂದು ಆಗ್ರಹಿಸಿದರು..
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…