ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯ 100ನೇ ವರ್ಷಾಚರಣೆ ವಿಶೇಷ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಇಂದು ಸಂಜೆ 5 ಗಂಟೆಗೆ ನಗರದ ಬಯಲು ಬಸವಣ್ಣ ದೇವಾಲಯದ ಬಳಿ ಆರ್.ಎಸ್.ಎಸ್ ಗೀತೆ ಹಾಡಿದ ನಂತರ ಆರಂಭವಾದ ವಿಜಯದಶಮಿ ಪಥಸಂಚಲನ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಬಸವಣ್ಣ ದೇವಾಲಯದ ಬಳಿ ಅಂತ್ಯಗೊಂಡಿತು.
ರಸ್ತೆಯ ಉದ್ದಕ್ಕೂ ಪಥಸಂಚಲನದ ಗಣವೇಷಧಾರಿಗಳ ಮೇಲೆ ಸಾರ್ವಜನಿಕರು ಪುಷ್ಪ ವೃಷ್ಟಿ ಸುರಿಸಿದರು. ವಿವಿಧ ಕಡೆಗಳಲ್ಲಿ ಮಹಿಳೆಯರು ರಸ್ತೆಯನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಗಣಧಾರಿಗಳಿಗೆ ಸ್ವಾಗತ ಕೋರಿದರು.
ಗಮನ ಸೆಳೆದ ಶಾಸಕ ಧೀರಜ್ ಮುನಿರಾಜ್
ಶಾಸಕ ಧೀರಜ್ ಮುನಿರಾಜು ಗಣ ವೇಷಧಾರಿಯಾಗಿ ಎಡ, ಬಲ, ಎಡ, ಬಲ ಎನ್ನುತ್ತಾ ಪಥಸಂಚಲನದಲ್ಲಿ ಪೂರ್ಣವಾಗಿ ಭಾಗಿಯಾಗಿ ಗಮನ ಸೆಳೆದರು.
ಪಥಸಂಚಲನದಲ್ಲಿ ಸುಮಾರು 600 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…