ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯ 100ನೇ ವರ್ಷಾಚರಣೆ ವಿಶೇಷ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಇಂದು ಸಂಜೆ 5 ಗಂಟೆಗೆ ನಗರದ ಬಯಲು ಬಸವಣ್ಣ ದೇವಾಲಯದ ಬಳಿ ಆರ್.ಎಸ್.ಎಸ್ ಗೀತೆ ಹಾಡಿದ ನಂತರ ಆರಂಭವಾದ ವಿಜಯದಶಮಿ ಪಥಸಂಚಲನ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಬಸವಣ್ಣ ದೇವಾಲಯದ ಬಳಿ ಅಂತ್ಯಗೊಂಡಿತು.
ರಸ್ತೆಯ ಉದ್ದಕ್ಕೂ ಪಥಸಂಚಲನದ ಗಣವೇಷಧಾರಿಗಳ ಮೇಲೆ ಸಾರ್ವಜನಿಕರು ಪುಷ್ಪ ವೃಷ್ಟಿ ಸುರಿಸಿದರು. ವಿವಿಧ ಕಡೆಗಳಲ್ಲಿ ಮಹಿಳೆಯರು ರಸ್ತೆಯನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಗಣಧಾರಿಗಳಿಗೆ ಸ್ವಾಗತ ಕೋರಿದರು.
ಗಮನ ಸೆಳೆದ ಶಾಸಕ ಧೀರಜ್ ಮುನಿರಾಜ್
ಶಾಸಕ ಧೀರಜ್ ಮುನಿರಾಜು ಗಣ ವೇಷಧಾರಿಯಾಗಿ ಎಡ, ಬಲ, ಎಡ, ಬಲ ಎನ್ನುತ್ತಾ ಪಥಸಂಚಲನದಲ್ಲಿ ಪೂರ್ಣವಾಗಿ ಭಾಗಿಯಾಗಿ ಗಮನ ಸೆಳೆದರು.
ಪಥಸಂಚಲನದಲ್ಲಿ ಸುಮಾರು 600 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…