ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯ 100ನೇ ವರ್ಷಾಚರಣೆ ವಿಶೇಷ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಇಂದು ಸಂಜೆ 5 ಗಂಟೆಗೆ ನಗರದ ಬಯಲು ಬಸವಣ್ಣ ದೇವಾಲಯದ ಬಳಿ ಆರ್.ಎಸ್.ಎಸ್ ಗೀತೆ ಹಾಡಿದ ನಂತರ ಆರಂಭವಾದ ವಿಜಯದಶಮಿ ಪಥಸಂಚಲನ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಬಸವಣ್ಣ ದೇವಾಲಯದ ಬಳಿ ಅಂತ್ಯಗೊಂಡಿತು.
ರಸ್ತೆಯ ಉದ್ದಕ್ಕೂ ಪಥಸಂಚಲನದ ಗಣವೇಷಧಾರಿಗಳ ಮೇಲೆ ಸಾರ್ವಜನಿಕರು ಪುಷ್ಪ ವೃಷ್ಟಿ ಸುರಿಸಿದರು. ವಿವಿಧ ಕಡೆಗಳಲ್ಲಿ ಮಹಿಳೆಯರು ರಸ್ತೆಯನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಗಣಧಾರಿಗಳಿಗೆ ಸ್ವಾಗತ ಕೋರಿದರು.
ಗಮನ ಸೆಳೆದ ಶಾಸಕ ಧೀರಜ್ ಮುನಿರಾಜ್
ಶಾಸಕ ಧೀರಜ್ ಮುನಿರಾಜು ಗಣ ವೇಷಧಾರಿಯಾಗಿ ಎಡ, ಬಲ, ಎಡ, ಬಲ ಎನ್ನುತ್ತಾ ಪಥಸಂಚಲನದಲ್ಲಿ ಪೂರ್ಣವಾಗಿ ಭಾಗಿಯಾಗಿ ಗಮನ ಸೆಳೆದರು.
ಪಥಸಂಚಲನದಲ್ಲಿ ಸುಮಾರು 600 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…