ಸಂಭ್ರಮದ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.

ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.

ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.

ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.

ದೊಡ್ಡಬಳ್ಳಾಪುರದಲ್ಲಿ ನಗರ ದೇವತೆ ಮುತ್ಯಾಲಮ್ಮ ಜಾತ್ರಾ ಮಹೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಎಲ್ಲಾ ಸದಸ್ಯರು, ಭಕ್ತಾದಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

9 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

10 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

16 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

17 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

22 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago