ಸಂಭ್ರಮದ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.

ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.

ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.

ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.

ದೊಡ್ಡಬಳ್ಳಾಪುರದಲ್ಲಿ ನಗರ ದೇವತೆ ಮುತ್ಯಾಲಮ್ಮ ಜಾತ್ರಾ ಮಹೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಎಲ್ಲಾ ಸದಸ್ಯರು, ಭಕ್ತಾದಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

57 minutes ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

16 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

23 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago