ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.
ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.
ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.
ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…