ಸಂಭ್ರಮದ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.

ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.

ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.

ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.

ದೊಡ್ಡಬಳ್ಳಾಪುರದಲ್ಲಿ ನಗರ ದೇವತೆ ಮುತ್ಯಾಲಮ್ಮ ಜಾತ್ರಾ ಮಹೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಎಲ್ಲಾ ಸದಸ್ಯರು, ಭಕ್ತಾದಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

2 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

8 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

10 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

22 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

23 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

1 day ago