ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.
ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.
ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.
ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…