ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.
ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.
ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.
ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…