ಸಂಭ್ರಮದ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.

ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.

ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.

ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.

ದೊಡ್ಡಬಳ್ಳಾಪುರದಲ್ಲಿ ನಗರ ದೇವತೆ ಮುತ್ಯಾಲಮ್ಮ ಜಾತ್ರಾ ಮಹೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಎಲ್ಲಾ ಸದಸ್ಯರು, ಭಕ್ತಾದಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

42 minutes ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago