ಸಂಭ್ರಮದ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.

ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.

ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.

ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.

ದೊಡ್ಡಬಳ್ಳಾಪುರದಲ್ಲಿ ನಗರ ದೇವತೆ ಮುತ್ಯಾಲಮ್ಮ ಜಾತ್ರಾ ಮಹೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಎಲ್ಲಾ ಸದಸ್ಯರು, ಭಕ್ತಾದಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

48 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

10 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago