ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.
ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.
ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.
ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…