ಸಂಭ್ರಮದ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.

ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.

ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.

ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.

ದೊಡ್ಡಬಳ್ಳಾಪುರದಲ್ಲಿ ನಗರ ದೇವತೆ ಮುತ್ಯಾಲಮ್ಮ ಜಾತ್ರಾ ಮಹೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಎಲ್ಲಾ ಸದಸ್ಯರು, ಭಕ್ತಾದಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

11 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago