ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ ನೆರವೇರಿತು.
ಹಸಿ ಕರಗ ಉತ್ಸವವನ್ನು ಸಹಸ್ರಾರು ಜನ ವೀಕ್ಷಿಸಿದರು. ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ಪೂಜಾರಿ ವೈ.ಭೀಮರಾಜ್ ಹಸಿ ಕರಗವನ್ನು ಹೊತ್ತು ಕರಗದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.
ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೇ ಬಸ್ ನಿಲ್ದಾಣ, ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯ, 7 ಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಮೊದಲಾದೆಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.
ಶುಕ್ರವಾರ ರಾತ್ರಿ ನಡೆಯಲಿರುವ ಶ್ರೀಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿದೆ.
ನಗರದ ವಿವಿಧ ವೃತ್ತಗಳಲ್ಲಿ ತಮಿಳುನಾಡು ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕಾರ, ಬೃಹತ್ ಕಟೌಟು ಮೆರುಗು ನೀಡಿವೆ. ಕರಗದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಕರಗ ಉತ್ಸವದ ದಿನದವರೆಗೆ ನಿತ್ಯ ಅಭಿಷೇಕ, ಪೊಂಗಲ್ ಸೇವೆ ನಡೆದವು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…