ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ ನೆರವೇರಿತು.

ಹಸಿ ಕರಗ ಉತ್ಸವವನ್ನು ಸಹಸ್ರಾರು ಜನ ವೀಕ್ಷಿಸಿದರು. ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ಪೂಜಾರಿ ವೈ.ಭೀಮರಾಜ್ ಹಸಿ ಕರಗವನ್ನು ಹೊತ್ತು ಕರಗದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೇ ಬಸ್‌ ನಿಲ್ದಾಣ, ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯ, 7 ಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಮೊದಲಾದೆಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.

ಶುಕ್ರವಾರ ರಾತ್ರಿ ನಡೆಯಲಿರುವ ಶ್ರೀಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ದೇವಾಲಯವನ್ನು ವಿದ್ಯುತ್‌ ದೀಪಾಲಂಕಾರಗಳಿಂದ ಅಲಂಕರಿಸಲಾಗಿದೆ.

ನಗರದ ವಿವಿಧ ವೃತ್ತಗಳಲ್ಲಿ ತಮಿಳುನಾಡು ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್‌ ದೀಪಾಲಂಕಾರ, ಬೃಹತ್‌ ಕಟೌಟು ಮೆರುಗು ನೀಡಿವೆ. ಕರಗದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಕರಗ ಉತ್ಸವದ ದಿನದ‌ವರೆಗೆ ನಿತ್ಯ ಅಭಿಷೇಕ, ಪೊಂಗಲ್‌ ಸೇವೆ ನಡೆದವು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

38 minutes ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

58 minutes ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

2 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

5 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

15 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago