ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಪ್ರತಿಯೊಬ್ಬರೂ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನದ ಅರಿವು ಮೂಡಿಸುವ ಉದ್ದೇಶದಿಂದ ವಾಲಿಬಾಲ್ ಪಂದ್ಯಾವಳಿಯ ಚಾಲನೆ ನೀಡಿ ಅವರು ಮಾತನಾಡಿ. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಮತದಾರರು ಹಣದ ಆಮಿಷ, ಜಾತಿ ಧರ್ಮಕ್ಕೆ ಕಟ್ಟುಬೀಳದೆ ಯೋಗ್ಯ ಅಭ್ಯರ್ಥಿಗೆ ನೈತಿಕವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.
ಜಿಪಂ ಸಿಇಒ ಅನುರಾಧ ಮಾತನಾಡಿ, ದೇಶವನ್ನು ಸದೃಢವಾಗಿ ಕಟ್ಟುವ ಸಲುವಾಗಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕನು ಮತದಾನ ಮಾಡುವ ಮೂಲಕ ಸಮಾಜವನ್ನು ಕಟ್ಟಬೇಕು ಎಂದರು ಯುವ ಮತದಾರರನ್ನು ಮತದಾನದತ್ತ ಸೆಳೆಯುವ ಸಲುವಾಗಿ ಜಾಗೃತಿ ಮೂಡಿಸಲು ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದರು.
ಯುವ ಮತದಾರರ ತಾವು ಕಡ್ಡಾಯವಾಗಿ ಮತದಾನ ಮಾಡುವುದಲ್ಲದೆ, ತಮ್ಮ ಮನೆಯಲ್ಲಿರುವ ಕುಟುಂಬದ ಸದಸ್ಯರನ್ನು ತಪ್ಪದೇ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಯುವಕರಲ್ಲಿ ಜಾಗೃತಿ ಮೂಡಿಸಿ, ಸ್ಪರ್ಧಾಳುಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ತಮ್ಮ ಮತವನ್ನು ಚಲಾಯಿಸಿ. ಹಾಗೂ ದೇಶ ಪ್ರಗತಿಗೆ ಪ್ರತಿಯೊಬ್ಬರು ಸಹಕರಿಸಿ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ನಗರಸಭೆ ಪೌರಾಯುಕ್ತ ಪರಮೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ ಸಿಬ್ಬಂದಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…