ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಪ್ರತಿಯೊಬ್ಬರೂ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನದ ಅರಿವು ಮೂಡಿಸುವ ಉದ್ದೇಶದಿಂದ ವಾಲಿಬಾಲ್ ಪಂದ್ಯಾವಳಿಯ ಚಾಲನೆ ನೀಡಿ ಅವರು ಮಾತನಾಡಿ. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಮತದಾರರು ಹಣದ ಆಮಿಷ, ಜಾತಿ ಧರ್ಮಕ್ಕೆ ಕಟ್ಟುಬೀಳದೆ ಯೋಗ್ಯ ಅಭ್ಯರ್ಥಿಗೆ ನೈತಿಕವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.
ಜಿಪಂ ಸಿಇಒ ಅನುರಾಧ ಮಾತನಾಡಿ, ದೇಶವನ್ನು ಸದೃಢವಾಗಿ ಕಟ್ಟುವ ಸಲುವಾಗಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕನು ಮತದಾನ ಮಾಡುವ ಮೂಲಕ ಸಮಾಜವನ್ನು ಕಟ್ಟಬೇಕು ಎಂದರು ಯುವ ಮತದಾರರನ್ನು ಮತದಾನದತ್ತ ಸೆಳೆಯುವ ಸಲುವಾಗಿ ಜಾಗೃತಿ ಮೂಡಿಸಲು ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದರು.
ಯುವ ಮತದಾರರ ತಾವು ಕಡ್ಡಾಯವಾಗಿ ಮತದಾನ ಮಾಡುವುದಲ್ಲದೆ, ತಮ್ಮ ಮನೆಯಲ್ಲಿರುವ ಕುಟುಂಬದ ಸದಸ್ಯರನ್ನು ತಪ್ಪದೇ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಯುವಕರಲ್ಲಿ ಜಾಗೃತಿ ಮೂಡಿಸಿ, ಸ್ಪರ್ಧಾಳುಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ತಮ್ಮ ಮತವನ್ನು ಚಲಾಯಿಸಿ. ಹಾಗೂ ದೇಶ ಪ್ರಗತಿಗೆ ಪ್ರತಿಯೊಬ್ಬರು ಸಹಕರಿಸಿ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ನಗರಸಭೆ ಪೌರಾಯುಕ್ತ ಪರಮೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…