ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ-ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಪ್ರತಿಯೊಬ್ಬರೂ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನದ ಅರಿವು ಮೂಡಿಸುವ ಉದ್ದೇಶದಿಂದ ವಾಲಿಬಾಲ್ ಪಂದ್ಯಾವಳಿಯ ಚಾಲನೆ ನೀಡಿ ಅವರು ಮಾತನಾಡಿ. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಮತದಾರರು ಹಣದ ಆಮಿಷ, ಜಾತಿ ಧರ್ಮಕ್ಕೆ ಕಟ್ಟುಬೀಳದೆ ಯೋಗ್ಯ ಅಭ್ಯರ್ಥಿಗೆ ನೈತಿಕವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಅನುರಾಧ ಮಾತನಾಡಿ, ದೇಶವನ್ನು ಸದೃಢವಾಗಿ ಕಟ್ಟುವ ಸಲುವಾಗಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕನು ಮತದಾನ ಮಾಡುವ ಮೂಲಕ ಸಮಾಜವನ್ನು ಕಟ್ಟಬೇಕು ಎಂದರು ಯುವ ಮತದಾರರನ್ನು ಮತದಾನದತ್ತ ಸೆಳೆಯುವ ಸಲುವಾಗಿ ಜಾಗೃತಿ ಮೂಡಿಸಲು ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದರು.

ಯುವ ಮತದಾರರ ತಾವು ಕಡ್ಡಾಯವಾಗಿ ಮತದಾನ ಮಾಡುವುದಲ್ಲದೆ, ತಮ್ಮ ಮನೆಯಲ್ಲಿರುವ ಕುಟುಂಬದ ಸದಸ್ಯರನ್ನು ತಪ್ಪದೇ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಯುವಕರಲ್ಲಿ ಜಾಗೃತಿ ಮೂಡಿಸಿ, ಸ್ಪರ್ಧಾಳುಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ತಾ.ಪಂ ಇಒ ಮುನಿರಾಜು ಮಾತನಾಡಿ, ಯುವಕರು ದೈಹಿಕವಾಗಿ ಸದೃಢರಾಗಲು ಕ್ರೀಡೆ ಸಹಕಾರಿಯಾಗಲಿದೆ ಅದೇ ರೀತಿಯಾಗಿ ದೇಶವನ್ನು ಕಟ್ಟಲು ಯುವಕರು ತಪ್ಪದೇ ಮತದಾನ ಮಾಡಬೇಕಿದೆ. ಈ ನಿಟ್ಟಿನಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಒಟ್ಟು 28 ತಂಡಗಳು ಭಾಗವಹಿಸಿದ್ದು ವಿಜೇತ ತಂಡಕ್ಕೆ 10 ಸಾವಿರ ಪ್ರೋತ್ಸಾಹ ಬಹುಮಾನವನ್ನು ನೀಡಲಾಗುತ್ತಿದೆ‌ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ತಮ್ಮ ಮತವನ್ನು ಚಲಾಯಿಸಿ. ಹಾಗೂ ದೇಶ ಪ್ರಗತಿಗೆ ಪ್ರತಿಯೊಬ್ಬರು ಸಹಕರಿಸಿ ಎಂದರು.

ಈ ವೇಳೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ನಗರಸಭೆ ಪೌರಾಯುಕ್ತ ಪರಮೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago