Categories: ಮೈಸೂರು

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ- ಸಿಎಂ ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನೇಮಕಗೊಂಡವರು. ಯಾವುದೇ ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರದಾದ್ಯಂತ ಚರ್ಚೆಯಾಗಬೇಕು ಎಂದರು.

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಜೊತೆಗಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು. ನ್ಯಾಯ ನನ್ನ ಪರವಾಗಿದೆ, ಇದನ್ನು ಎದುರಿಸಿ ಗೆಲ್ಲುತ್ತೇನೆ ಎಂದು ಹೇಳಿದರು.

ನಮ್ಮ ಸರ್ಕಾರಕ್ಕೆ ಕಳೆದ ಚುನಾವಣೆಯಲ್ಲಿ ಜನರ ಆಶೀರ್ವಾದ ಸಿಕ್ಕಿದೆ, ಅದಕ್ಕೆ ತಕ್ಕಂತೆ ನಾವು ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ. ಇದಕ್ಕೆ ರಾಜ್ಯಪಾಲರು ಅಡ್ಡಿಪಡಿಸಬಾರದು, ಅಡ್ಡಿಪಡಿಸಿದರೆ ನಾವು ಅನಿವಾರ್ಯವಾಗಿ ಪ್ರತಿರೋಧ ವ್ಯಕ್ತಪಡಿಸಬೇಕಾಗುತ್ತದೆ ಎಂದು ತಿಳಿಸಿದರು.

ನಾನು ಯಾವ ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಯೇ? ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಾರೆ, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ರಾಜೀನಾಮೆ ನೀಡಿದ್ರಾ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ, ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ. ಹಾಗಾಗಿ ಈಗ ಸುಳ್ಳು ಆರೋಪದ ಹಾದಿ ಹಿಡಿದಿದ್ದಾರೆ ಎಂದು ಹೇಳಿದರು.

ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಬಿಜೆಪಿ ಅಧಿಕಾರದಲ್ಲಿರುವ ಅನೇಕ ರಾಜ್ಯಗಳಲ್ಲಿ ಇಂದಿಗೂ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯಲ್ಲಿ ಈ ದ್ವಂದ್ವ ಧೋರಣೆ ಏಕೆ? ರಾಜ್ಯ ಬಿಜೆಪಿಯಲ್ಲಿ ತಪ್ಪು ಮಾಡದಿರುವ, ಭ್ರಷ್ಟಾಚಾರ ಮಾಡದಿರುವ ಒಬ್ಬ ನಾಯಕನಾದರೂ ಇದ್ದಾನ? ಎಂದು ಪ್ರಶ್ನೆ ಮಾಡಿದರು.

ರಾಜ್ಯ ಬಿಜೆಪಿ – ಜೆಡಿಎಸ್ ಹಾಗೂ ರಾಜ್ಯಪಾಲರು ನಮ್ಮ ವಿರುದ್ಧ ಎಷ್ಟೇ ಕಿರುಕುಳ ನೀಡಿದರೂ ನಾವು ಬಡವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ನನಗೆ ಬೆಂಬಲವನ್ನು ಸೂಚಿಸಿದ್ದಾರೆ. ನಮ್ಮ ಜೊತೆ ಜನರಿದ್ದಾರೆ, ಅವರಿಗಾಗಿ ನಮ್ಮ ಸರ್ಕಾರವಿದೆ ಎಂದರು.

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

22 minutes ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

15 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago