Categories: ಮೈಸೂರು

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ- ಸಿಎಂ ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನೇಮಕಗೊಂಡವರು. ಯಾವುದೇ ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರದಾದ್ಯಂತ ಚರ್ಚೆಯಾಗಬೇಕು ಎಂದರು.

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಜೊತೆಗಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು. ನ್ಯಾಯ ನನ್ನ ಪರವಾಗಿದೆ, ಇದನ್ನು ಎದುರಿಸಿ ಗೆಲ್ಲುತ್ತೇನೆ ಎಂದು ಹೇಳಿದರು.

ನಮ್ಮ ಸರ್ಕಾರಕ್ಕೆ ಕಳೆದ ಚುನಾವಣೆಯಲ್ಲಿ ಜನರ ಆಶೀರ್ವಾದ ಸಿಕ್ಕಿದೆ, ಅದಕ್ಕೆ ತಕ್ಕಂತೆ ನಾವು ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ. ಇದಕ್ಕೆ ರಾಜ್ಯಪಾಲರು ಅಡ್ಡಿಪಡಿಸಬಾರದು, ಅಡ್ಡಿಪಡಿಸಿದರೆ ನಾವು ಅನಿವಾರ್ಯವಾಗಿ ಪ್ರತಿರೋಧ ವ್ಯಕ್ತಪಡಿಸಬೇಕಾಗುತ್ತದೆ ಎಂದು ತಿಳಿಸಿದರು.

ನಾನು ಯಾವ ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಯೇ? ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಾರೆ, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ರಾಜೀನಾಮೆ ನೀಡಿದ್ರಾ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ, ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ. ಹಾಗಾಗಿ ಈಗ ಸುಳ್ಳು ಆರೋಪದ ಹಾದಿ ಹಿಡಿದಿದ್ದಾರೆ ಎಂದು ಹೇಳಿದರು.

ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಬಿಜೆಪಿ ಅಧಿಕಾರದಲ್ಲಿರುವ ಅನೇಕ ರಾಜ್ಯಗಳಲ್ಲಿ ಇಂದಿಗೂ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯಲ್ಲಿ ಈ ದ್ವಂದ್ವ ಧೋರಣೆ ಏಕೆ? ರಾಜ್ಯ ಬಿಜೆಪಿಯಲ್ಲಿ ತಪ್ಪು ಮಾಡದಿರುವ, ಭ್ರಷ್ಟಾಚಾರ ಮಾಡದಿರುವ ಒಬ್ಬ ನಾಯಕನಾದರೂ ಇದ್ದಾನ? ಎಂದು ಪ್ರಶ್ನೆ ಮಾಡಿದರು.

ರಾಜ್ಯ ಬಿಜೆಪಿ – ಜೆಡಿಎಸ್ ಹಾಗೂ ರಾಜ್ಯಪಾಲರು ನಮ್ಮ ವಿರುದ್ಧ ಎಷ್ಟೇ ಕಿರುಕುಳ ನೀಡಿದರೂ ನಾವು ಬಡವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ನನಗೆ ಬೆಂಬಲವನ್ನು ಸೂಚಿಸಿದ್ದಾರೆ. ನಮ್ಮ ಜೊತೆ ಜನರಿದ್ದಾರೆ, ಅವರಿಗಾಗಿ ನಮ್ಮ ಸರ್ಕಾರವಿದೆ ಎಂದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

35 minutes ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

1 hour ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

5 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

11 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

21 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago