Categories: ಮೈಸೂರು

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ- ಸಿಎಂ ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನೇಮಕಗೊಂಡವರು. ಯಾವುದೇ ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರದಾದ್ಯಂತ ಚರ್ಚೆಯಾಗಬೇಕು ಎಂದರು.

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಜೊತೆಗಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು. ನ್ಯಾಯ ನನ್ನ ಪರವಾಗಿದೆ, ಇದನ್ನು ಎದುರಿಸಿ ಗೆಲ್ಲುತ್ತೇನೆ ಎಂದು ಹೇಳಿದರು.

ನಮ್ಮ ಸರ್ಕಾರಕ್ಕೆ ಕಳೆದ ಚುನಾವಣೆಯಲ್ಲಿ ಜನರ ಆಶೀರ್ವಾದ ಸಿಕ್ಕಿದೆ, ಅದಕ್ಕೆ ತಕ್ಕಂತೆ ನಾವು ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ. ಇದಕ್ಕೆ ರಾಜ್ಯಪಾಲರು ಅಡ್ಡಿಪಡಿಸಬಾರದು, ಅಡ್ಡಿಪಡಿಸಿದರೆ ನಾವು ಅನಿವಾರ್ಯವಾಗಿ ಪ್ರತಿರೋಧ ವ್ಯಕ್ತಪಡಿಸಬೇಕಾಗುತ್ತದೆ ಎಂದು ತಿಳಿಸಿದರು.

ನಾನು ಯಾವ ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಯೇ? ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಾರೆ, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ರಾಜೀನಾಮೆ ನೀಡಿದ್ರಾ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ, ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ. ಹಾಗಾಗಿ ಈಗ ಸುಳ್ಳು ಆರೋಪದ ಹಾದಿ ಹಿಡಿದಿದ್ದಾರೆ ಎಂದು ಹೇಳಿದರು.

ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಬಿಜೆಪಿ ಅಧಿಕಾರದಲ್ಲಿರುವ ಅನೇಕ ರಾಜ್ಯಗಳಲ್ಲಿ ಇಂದಿಗೂ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯಲ್ಲಿ ಈ ದ್ವಂದ್ವ ಧೋರಣೆ ಏಕೆ? ರಾಜ್ಯ ಬಿಜೆಪಿಯಲ್ಲಿ ತಪ್ಪು ಮಾಡದಿರುವ, ಭ್ರಷ್ಟಾಚಾರ ಮಾಡದಿರುವ ಒಬ್ಬ ನಾಯಕನಾದರೂ ಇದ್ದಾನ? ಎಂದು ಪ್ರಶ್ನೆ ಮಾಡಿದರು.

ರಾಜ್ಯ ಬಿಜೆಪಿ – ಜೆಡಿಎಸ್ ಹಾಗೂ ರಾಜ್ಯಪಾಲರು ನಮ್ಮ ವಿರುದ್ಧ ಎಷ್ಟೇ ಕಿರುಕುಳ ನೀಡಿದರೂ ನಾವು ಬಡವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ನನಗೆ ಬೆಂಬಲವನ್ನು ಸೂಚಿಸಿದ್ದಾರೆ. ನಮ್ಮ ಜೊತೆ ಜನರಿದ್ದಾರೆ, ಅವರಿಗಾಗಿ ನಮ್ಮ ಸರ್ಕಾರವಿದೆ ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago