Categories: ಕೋಲಾರ

ಸಂವಿಧಾನ ಉಳಿವಿಗಾಗಿ ಕದಸಂಸ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ: ಹೆಣ್ಣೂರು ಶ್ರೀನಿವಾಸ್

ಕೋಲಾರ: ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ಗಲಾಟೆ ಮಾಡಿ ದೇವರ ಹೆಸರಿನಲ್ಲಿ ಜನಗಳನ್ನು ಯಾಮಾರಿಸಿದ್ದು ಅಲ್ಲದೆ ಸಂವಿಧಾನಕ್ಕೆ ಧಕ್ಕೆ ಉಂಟುಮಾಡಲು ಹೊರಟಿರುವ ಎನ್.ಡಿ.ಎ.ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂವಿಧಾನ ರಕ್ಷಣೆಗೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷದ ಕೆ.ವಿ ಗೌತಮ್ ಅವರನ್ನು ಬೆಂಬಲಿಸಲಿದೆ ಎಂದು ಕದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಹತ್ತು ವರ್ಷಗಳ ಮೋದಿ ಸರಕಾರ ಮತ್ತು ರಾಜ್ಯದ ಹಿಂದಿನ ಬಿಜೆಪಿ ನೇತೃತ್ವದ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ನಿಂತಿದ್ದು ಸಾಮಾನ್ಯ ಜನರನ್ನು ಬೀದಿಗೆ ತಂದು ನಿಲ್ಲಿಸುವ ಕೆಲಸ ಮಾಡಿದ್ದಾರೆ. ಇದರ ಪರಿಣಾಮವಾಗಿ ಕಳೆದ 2023 ರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕದಸಂಸ ತೀರ್ಮಾನವನ್ನು ಕೈಗೊಂಡು ಇಡೀ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲಾಗಿದೆ ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸಂಘಟನೆಯ ಮುಖಂಡರು ಕಾರ್ಯಕರ್ತರು ಶ್ರಮ ವಹಿಸಲಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಅನೇಕ ಆಶ್ವಾಸನೆಗಳನ್ನು ನೀಡಿದ್ದರು ಪ್ರಮುಖವಾಗಿ ಅಚ್ಛೇದಿನ್ ಹೆಸರಿನಲ್ಲಿ ಮತ ಪಡೆದ ಬಿಜೆಪಿಯವರು ಪ್ರತಿಯೊಬ್ಬರಿಗೂ 15 ಲಕ್ಷ ಖಾತೆಗೆ ಹಾಕುತ್ತೇವೆ, ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ಬೆಲೆ ಇಳಿಸುತ್ತೇವೆ ಎಂದು ಹೇಳಿ ದಿನನಿತ್ಯ ಏರಿಕೆ ಮಾಡಿದರು ಜಿಎಸ್ಟಿಯಲ್ಲಿ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಮಲತಾಯಿ ಧೋರಣೆ ಅನುಸರಿಸಿದ್ದಾರೆ ಯುವಕರಿಗೆ ಪ್ರತಿ ವರ್ಷವೂ2 ಕೋಟಿ ಉದ್ಯೋಗ ಎಂದು ಆಸೆ ಹುಟ್ಟಿಸಿ ಅನ್ಯಾಯ ಮಾಡಿದರು ಎಂದು ಆರೋಪಿಸಿದರು.

ಕಳೆದ 10 ವರ್ಷಗಳಲ್ಲಿ ಮೋದಿ ಮತ್ತು ಧರ್ಮದ ಅಮಲನ್ನು ತುಂಬಿಸಿ ಸಮಸ್ಯೆಗಳನ್ನು ಬದಿಗೊತ್ತಿದ್ದಾರೆ ಇದೀಗ ಸಂಸದರು, ಸಚಿವರು ಸಂವಿಧಾನ ಬದಲಾವಣೆ ಮಾತಾಡಿದ್ದಾರೆ ಮುಂದೆ ಏನಾದರೂ 400 ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಖಚಿತ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಈ ಎಲ್ಲ ಅಂಶಗಳನ್ನು ಮನಗಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ರಾಜಕೀಯ ಮಾಡಬೇಕು ಬಿಜೆಪಿಯ ಸಮಾವೇಶದಲ್ಲಿ ದಲಿತ ಸಂಘಟನೆಗಳು ಭಾಗವಹಿಸಿದ್ದು ಕೆಲವರು ಕೃಪಾ ಪೋಷಕ ನಾಟಕ ಮಂಡಳಿಯ ಏಜೆಂಟರು ಅಲ್ಲಿದ್ದಾರೆ ಅವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ವಿಜಯನರಸಿಂಹ, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಬೆಂಗಳೂರು ವಿಭಾಗದ ವೆಂಕಟೇಶ್, ಜಿಲ್ಲಾ ಸಂಘಟನಾ ಸಂಚಾಲಕರಾದ ಗೋವಿಂದರಾಜು, ವೆಂಕಟೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago