Categories: ಕೋಲಾರ

ಸಂವಿಧಾನ ಉಳಿವಿಗಾಗಿ ಕದಸಂಸ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ: ಹೆಣ್ಣೂರು ಶ್ರೀನಿವಾಸ್

ಕೋಲಾರ: ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ಗಲಾಟೆ ಮಾಡಿ ದೇವರ ಹೆಸರಿನಲ್ಲಿ ಜನಗಳನ್ನು ಯಾಮಾರಿಸಿದ್ದು ಅಲ್ಲದೆ ಸಂವಿಧಾನಕ್ಕೆ ಧಕ್ಕೆ ಉಂಟುಮಾಡಲು ಹೊರಟಿರುವ ಎನ್.ಡಿ.ಎ.ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂವಿಧಾನ ರಕ್ಷಣೆಗೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷದ ಕೆ.ವಿ ಗೌತಮ್ ಅವರನ್ನು ಬೆಂಬಲಿಸಲಿದೆ ಎಂದು ಕದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಹತ್ತು ವರ್ಷಗಳ ಮೋದಿ ಸರಕಾರ ಮತ್ತು ರಾಜ್ಯದ ಹಿಂದಿನ ಬಿಜೆಪಿ ನೇತೃತ್ವದ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ನಿಂತಿದ್ದು ಸಾಮಾನ್ಯ ಜನರನ್ನು ಬೀದಿಗೆ ತಂದು ನಿಲ್ಲಿಸುವ ಕೆಲಸ ಮಾಡಿದ್ದಾರೆ. ಇದರ ಪರಿಣಾಮವಾಗಿ ಕಳೆದ 2023 ರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕದಸಂಸ ತೀರ್ಮಾನವನ್ನು ಕೈಗೊಂಡು ಇಡೀ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲಾಗಿದೆ ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸಂಘಟನೆಯ ಮುಖಂಡರು ಕಾರ್ಯಕರ್ತರು ಶ್ರಮ ವಹಿಸಲಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಅನೇಕ ಆಶ್ವಾಸನೆಗಳನ್ನು ನೀಡಿದ್ದರು ಪ್ರಮುಖವಾಗಿ ಅಚ್ಛೇದಿನ್ ಹೆಸರಿನಲ್ಲಿ ಮತ ಪಡೆದ ಬಿಜೆಪಿಯವರು ಪ್ರತಿಯೊಬ್ಬರಿಗೂ 15 ಲಕ್ಷ ಖಾತೆಗೆ ಹಾಕುತ್ತೇವೆ, ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ಬೆಲೆ ಇಳಿಸುತ್ತೇವೆ ಎಂದು ಹೇಳಿ ದಿನನಿತ್ಯ ಏರಿಕೆ ಮಾಡಿದರು ಜಿಎಸ್ಟಿಯಲ್ಲಿ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಮಲತಾಯಿ ಧೋರಣೆ ಅನುಸರಿಸಿದ್ದಾರೆ ಯುವಕರಿಗೆ ಪ್ರತಿ ವರ್ಷವೂ2 ಕೋಟಿ ಉದ್ಯೋಗ ಎಂದು ಆಸೆ ಹುಟ್ಟಿಸಿ ಅನ್ಯಾಯ ಮಾಡಿದರು ಎಂದು ಆರೋಪಿಸಿದರು.

ಕಳೆದ 10 ವರ್ಷಗಳಲ್ಲಿ ಮೋದಿ ಮತ್ತು ಧರ್ಮದ ಅಮಲನ್ನು ತುಂಬಿಸಿ ಸಮಸ್ಯೆಗಳನ್ನು ಬದಿಗೊತ್ತಿದ್ದಾರೆ ಇದೀಗ ಸಂಸದರು, ಸಚಿವರು ಸಂವಿಧಾನ ಬದಲಾವಣೆ ಮಾತಾಡಿದ್ದಾರೆ ಮುಂದೆ ಏನಾದರೂ 400 ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಖಚಿತ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಈ ಎಲ್ಲ ಅಂಶಗಳನ್ನು ಮನಗಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ರಾಜಕೀಯ ಮಾಡಬೇಕು ಬಿಜೆಪಿಯ ಸಮಾವೇಶದಲ್ಲಿ ದಲಿತ ಸಂಘಟನೆಗಳು ಭಾಗವಹಿಸಿದ್ದು ಕೆಲವರು ಕೃಪಾ ಪೋಷಕ ನಾಟಕ ಮಂಡಳಿಯ ಏಜೆಂಟರು ಅಲ್ಲಿದ್ದಾರೆ ಅವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ವಿಜಯನರಸಿಂಹ, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಬೆಂಗಳೂರು ವಿಭಾಗದ ವೆಂಕಟೇಶ್, ಜಿಲ್ಲಾ ಸಂಘಟನಾ ಸಂಚಾಲಕರಾದ ಗೋವಿಂದರಾಜು, ವೆಂಕಟೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago