ಕೋಲಾರ: ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ಗಲಾಟೆ ಮಾಡಿ ದೇವರ ಹೆಸರಿನಲ್ಲಿ ಜನಗಳನ್ನು ಯಾಮಾರಿಸಿದ್ದು ಅಲ್ಲದೆ ಸಂವಿಧಾನಕ್ಕೆ ಧಕ್ಕೆ ಉಂಟುಮಾಡಲು ಹೊರಟಿರುವ ಎನ್.ಡಿ.ಎ.ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂವಿಧಾನ ರಕ್ಷಣೆಗೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷದ ಕೆ.ವಿ ಗೌತಮ್ ಅವರನ್ನು ಬೆಂಬಲಿಸಲಿದೆ ಎಂದು ಕದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಹತ್ತು ವರ್ಷಗಳ ಮೋದಿ ಸರಕಾರ ಮತ್ತು ರಾಜ್ಯದ ಹಿಂದಿನ ಬಿಜೆಪಿ ನೇತೃತ್ವದ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ನಿಂತಿದ್ದು ಸಾಮಾನ್ಯ ಜನರನ್ನು ಬೀದಿಗೆ ತಂದು ನಿಲ್ಲಿಸುವ ಕೆಲಸ ಮಾಡಿದ್ದಾರೆ. ಇದರ ಪರಿಣಾಮವಾಗಿ ಕಳೆದ 2023 ರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕದಸಂಸ ತೀರ್ಮಾನವನ್ನು ಕೈಗೊಂಡು ಇಡೀ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲಾಗಿದೆ ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸಂಘಟನೆಯ ಮುಖಂಡರು ಕಾರ್ಯಕರ್ತರು ಶ್ರಮ ವಹಿಸಲಿದ್ದಾರೆ ಎಂದು ತಿಳಿಸಿದರು.
ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಅನೇಕ ಆಶ್ವಾಸನೆಗಳನ್ನು ನೀಡಿದ್ದರು ಪ್ರಮುಖವಾಗಿ ಅಚ್ಛೇದಿನ್ ಹೆಸರಿನಲ್ಲಿ ಮತ ಪಡೆದ ಬಿಜೆಪಿಯವರು ಪ್ರತಿಯೊಬ್ಬರಿಗೂ 15 ಲಕ್ಷ ಖಾತೆಗೆ ಹಾಕುತ್ತೇವೆ, ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ಬೆಲೆ ಇಳಿಸುತ್ತೇವೆ ಎಂದು ಹೇಳಿ ದಿನನಿತ್ಯ ಏರಿಕೆ ಮಾಡಿದರು ಜಿಎಸ್ಟಿಯಲ್ಲಿ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಮಲತಾಯಿ ಧೋರಣೆ ಅನುಸರಿಸಿದ್ದಾರೆ ಯುವಕರಿಗೆ ಪ್ರತಿ ವರ್ಷವೂ2 ಕೋಟಿ ಉದ್ಯೋಗ ಎಂದು ಆಸೆ ಹುಟ್ಟಿಸಿ ಅನ್ಯಾಯ ಮಾಡಿದರು ಎಂದು ಆರೋಪಿಸಿದರು.
ಕಳೆದ 10 ವರ್ಷಗಳಲ್ಲಿ ಮೋದಿ ಮತ್ತು ಧರ್ಮದ ಅಮಲನ್ನು ತುಂಬಿಸಿ ಸಮಸ್ಯೆಗಳನ್ನು ಬದಿಗೊತ್ತಿದ್ದಾರೆ ಇದೀಗ ಸಂಸದರು, ಸಚಿವರು ಸಂವಿಧಾನ ಬದಲಾವಣೆ ಮಾತಾಡಿದ್ದಾರೆ ಮುಂದೆ ಏನಾದರೂ 400 ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಖಚಿತ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಈ ಎಲ್ಲ ಅಂಶಗಳನ್ನು ಮನಗಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ರಾಜಕೀಯ ಮಾಡಬೇಕು ಬಿಜೆಪಿಯ ಸಮಾವೇಶದಲ್ಲಿ ದಲಿತ ಸಂಘಟನೆಗಳು ಭಾಗವಹಿಸಿದ್ದು ಕೆಲವರು ಕೃಪಾ ಪೋಷಕ ನಾಟಕ ಮಂಡಳಿಯ ಏಜೆಂಟರು ಅಲ್ಲಿದ್ದಾರೆ ಅವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ವಿಜಯನರಸಿಂಹ, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಬೆಂಗಳೂರು ವಿಭಾಗದ ವೆಂಕಟೇಶ್, ಜಿಲ್ಲಾ ಸಂಘಟನಾ ಸಂಚಾಲಕರಾದ ಗೋವಿಂದರಾಜು, ವೆಂಕಟೇಶ್ ಮುಂತಾದವರು ಇದ್ದರು
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…