Categories: ಕೋಲಾರ

ಸಂವಿಧಾನ ಒಂದು ಜಾತಿಗೆ ಸೀಮಿತವಲ್ಲ, ಅದು ದೇಶಕ್ಕೆ ಸೀಮಿತವಾಗಿದೆ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಂವಿಧಾನವನ್ನು ಕೇವಲ ಒಂದು ಜಾತಿಗೆ ಸೀಮಿತವಲ್ಲ ಅದು ದೇಶಕ್ಕೆ ಸೀಮಿತವಾಗಿದೆ. ಅನ್ಯರಾಷ್ಟ್ರದ ಜನರು ನಮ್ಮ ದೇಶದ ಸಂವಿಧಾನದ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಹೊಂದಿದರೆ ನಾವು ಮಾತ್ರ ಪ್ರತಿ ವಿಷಯದಲ್ಲೂ ವಿರೋಧ ಮಾಡಿಕೊಂಡು ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿದ್ದೇವೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಬುಧವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಇಡೀ ವಿಶ್ವದಲ್ಲೇ ಮರೆಯಲಾಗದ ಮಾನವ ಸ್ವರೂಪದ ಮಹಾನ್ ಚೇತನವಾಗಿದ್ದು, ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ರಕ್ಷಣೆ ಪಡೆಯಲು ಅಂಬೇಡ್ಕರ್ ಕಾರಣವಾಗಿದ್ದಾರೆ. ಅವರ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ. ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ ಎಂದರು.

ಅಂಬೇಡ್ಕರ್ ಅವರು ತಮ್ಮ ಕುಟುಂಬವನ್ನು ತ್ಯಾಗ ಮಾಡಿ ದೇಶದ ಬಡಜನರ ಬದುಕಿಗೆ ಆಸರೆಯಾಗಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಇವತ್ತು ಅಪಮಾನ ಅಗೌರವ ತೋರುವ ಶಕ್ತಿಗಳಿಗೆ ತನ್ನಷ್ಟಕ್ಕೆ ತಾನೇ ಶಿಕ್ಷೆಯನ್ನು ದೇವರು ನೀಡುವಂತಾಗಲಿ. ಪ್ರಾಚೀನ ಕಾಲದಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಲೇ ಬಂದಿದೆ. ಅದು ಇಂದಿಗೂ ನಿಂತಿಲ್ಲ. ಸಂವಿಧಾನ ಇದ್ದರೂ ಹೆಸರಿಗಷ್ಟೆ ಎಲ್ಲರೂ ಒಂದೇ ಎನ್ನುವ ನೀತಿ ಇದೆ. ಆದರೆ, ನಿಜವಾಗಲೂ ಜಾತೀಯತೆ ಅತಿಯಾಗಿದೆ ಇದನ್ನು ಹೊಗಲಾಡಿಸಿ ನೆಮ್ಮದಿ ‌ಬದುಕು ಕಾಣಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ರಕ್ಷಣೆ ಮಾಡಿದರೆ ಬಿಜೆಪಿ ಸಂವಿಧಾನ ಬದಲಾವಣೆಗೆ ಮುಂದಾಗಿದೆ. ದೇಶದಲ್ಲಿ ಯಾವುದೇ ಚುನಾವಣೆ ಬಂದರೂ ಅಂಬೇಡ್ಕರ್ ಅವರ ಹೆಸರು ಹೇಳದೇ ಇರುವ ಪಕ್ಷಗಳು ಇಲ್ಲ ದಲಿತರ ಬಗ್ಗೆ ಗೌರವದಿಂದ ಕಾಣುವ ಕಾಂಗ್ರೆಸ್ ಪಕ್ಷದಿಂದ ಮುಂದೆ ಇಂಡಿಯಾ ಒಕ್ಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ಮಾಡುವ ಅವಕಾಶಗಳು ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗುತ್ತದೆ ಎಂದರು‌.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಚುನಾವಣೆ ಬಂದಾಗ ಮಾತ್ರವೇ ಸೀಮಿತಗೊಳಿಸದೇ ವರ್ಷದ 365 ದಿನವು ನೆನೆಯುವಂತಾಗಬೇಕು. ಜಯಂತಿಗೆ ಜಾತಿಯ ಬಣ್ಣ ಕಟ್ಟಬಾರದು. ಸಮಾಜದಲ್ಲಿ ಮೀಸಲಾತಿ ದಲಿತರಿಗೆ ಅಷ್ಟೇ ಸೀಮಿತವಲ್ಲ. ಸಮಾಜದಲ್ಲಿನ ಬಡವರಿಗೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ದಲಿತರು ಮತ್ತು ಮುಸ್ಲಿಮರು ಒಗ್ಗಟ್ಟಿನಿಂದ ಹೋಗಬೇಕು. ಆಗ ಮಾತ್ರವೇ ಸಮಸ್ಯೆಗೆ ಶೀಘ್ರದಲ್ಲಿ ಪರಿಹರಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಲೋಕೇಶ್, ದಸಂಸ ರಾಜ್ಯ ಸಂಚಾಲಕ ಮೋಹನ್ ರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಇನಾಯಿತ್ ಪಾಷ, ಪೀಸ್ ಮಂಜು, ನಾಗೇಂದ್ರ, ಖಯ್ತೂಂ, ಪ್ರವೀಣ್ ಮುಂತಾದವರು ಇದ್ದರು

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

5 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

7 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

20 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

20 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

23 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

23 hours ago