Categories: ಕೋಲಾರ

ಸಂವಿಧಾನ ಒಂದು ಜಾತಿಗೆ ಸೀಮಿತವಲ್ಲ, ಅದು ದೇಶಕ್ಕೆ ಸೀಮಿತವಾಗಿದೆ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಂವಿಧಾನವನ್ನು ಕೇವಲ ಒಂದು ಜಾತಿಗೆ ಸೀಮಿತವಲ್ಲ ಅದು ದೇಶಕ್ಕೆ ಸೀಮಿತವಾಗಿದೆ. ಅನ್ಯರಾಷ್ಟ್ರದ ಜನರು ನಮ್ಮ ದೇಶದ ಸಂವಿಧಾನದ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಹೊಂದಿದರೆ ನಾವು ಮಾತ್ರ ಪ್ರತಿ ವಿಷಯದಲ್ಲೂ ವಿರೋಧ ಮಾಡಿಕೊಂಡು ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿದ್ದೇವೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಬುಧವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಇಡೀ ವಿಶ್ವದಲ್ಲೇ ಮರೆಯಲಾಗದ ಮಾನವ ಸ್ವರೂಪದ ಮಹಾನ್ ಚೇತನವಾಗಿದ್ದು, ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ರಕ್ಷಣೆ ಪಡೆಯಲು ಅಂಬೇಡ್ಕರ್ ಕಾರಣವಾಗಿದ್ದಾರೆ. ಅವರ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ. ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ ಎಂದರು.

ಅಂಬೇಡ್ಕರ್ ಅವರು ತಮ್ಮ ಕುಟುಂಬವನ್ನು ತ್ಯಾಗ ಮಾಡಿ ದೇಶದ ಬಡಜನರ ಬದುಕಿಗೆ ಆಸರೆಯಾಗಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಇವತ್ತು ಅಪಮಾನ ಅಗೌರವ ತೋರುವ ಶಕ್ತಿಗಳಿಗೆ ತನ್ನಷ್ಟಕ್ಕೆ ತಾನೇ ಶಿಕ್ಷೆಯನ್ನು ದೇವರು ನೀಡುವಂತಾಗಲಿ. ಪ್ರಾಚೀನ ಕಾಲದಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಲೇ ಬಂದಿದೆ. ಅದು ಇಂದಿಗೂ ನಿಂತಿಲ್ಲ. ಸಂವಿಧಾನ ಇದ್ದರೂ ಹೆಸರಿಗಷ್ಟೆ ಎಲ್ಲರೂ ಒಂದೇ ಎನ್ನುವ ನೀತಿ ಇದೆ. ಆದರೆ, ನಿಜವಾಗಲೂ ಜಾತೀಯತೆ ಅತಿಯಾಗಿದೆ ಇದನ್ನು ಹೊಗಲಾಡಿಸಿ ನೆಮ್ಮದಿ ‌ಬದುಕು ಕಾಣಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ರಕ್ಷಣೆ ಮಾಡಿದರೆ ಬಿಜೆಪಿ ಸಂವಿಧಾನ ಬದಲಾವಣೆಗೆ ಮುಂದಾಗಿದೆ. ದೇಶದಲ್ಲಿ ಯಾವುದೇ ಚುನಾವಣೆ ಬಂದರೂ ಅಂಬೇಡ್ಕರ್ ಅವರ ಹೆಸರು ಹೇಳದೇ ಇರುವ ಪಕ್ಷಗಳು ಇಲ್ಲ ದಲಿತರ ಬಗ್ಗೆ ಗೌರವದಿಂದ ಕಾಣುವ ಕಾಂಗ್ರೆಸ್ ಪಕ್ಷದಿಂದ ಮುಂದೆ ಇಂಡಿಯಾ ಒಕ್ಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ಮಾಡುವ ಅವಕಾಶಗಳು ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗುತ್ತದೆ ಎಂದರು‌.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಚುನಾವಣೆ ಬಂದಾಗ ಮಾತ್ರವೇ ಸೀಮಿತಗೊಳಿಸದೇ ವರ್ಷದ 365 ದಿನವು ನೆನೆಯುವಂತಾಗಬೇಕು. ಜಯಂತಿಗೆ ಜಾತಿಯ ಬಣ್ಣ ಕಟ್ಟಬಾರದು. ಸಮಾಜದಲ್ಲಿ ಮೀಸಲಾತಿ ದಲಿತರಿಗೆ ಅಷ್ಟೇ ಸೀಮಿತವಲ್ಲ. ಸಮಾಜದಲ್ಲಿನ ಬಡವರಿಗೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ದಲಿತರು ಮತ್ತು ಮುಸ್ಲಿಮರು ಒಗ್ಗಟ್ಟಿನಿಂದ ಹೋಗಬೇಕು. ಆಗ ಮಾತ್ರವೇ ಸಮಸ್ಯೆಗೆ ಶೀಘ್ರದಲ್ಲಿ ಪರಿಹರಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಲೋಕೇಶ್, ದಸಂಸ ರಾಜ್ಯ ಸಂಚಾಲಕ ಮೋಹನ್ ರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಇನಾಯಿತ್ ಪಾಷ, ಪೀಸ್ ಮಂಜು, ನಾಗೇಂದ್ರ, ಖಯ್ತೂಂ, ಪ್ರವೀಣ್ ಮುಂತಾದವರು ಇದ್ದರು

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago