Categories: ಕೋಲಾರ

ಸಂವಿಧಾನ ಒಂದು ಜಾತಿಗೆ ಸೀಮಿತವಲ್ಲ, ಅದು ದೇಶಕ್ಕೆ ಸೀಮಿತವಾಗಿದೆ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಂವಿಧಾನವನ್ನು ಕೇವಲ ಒಂದು ಜಾತಿಗೆ ಸೀಮಿತವಲ್ಲ ಅದು ದೇಶಕ್ಕೆ ಸೀಮಿತವಾಗಿದೆ. ಅನ್ಯರಾಷ್ಟ್ರದ ಜನರು ನಮ್ಮ ದೇಶದ ಸಂವಿಧಾನದ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಹೊಂದಿದರೆ ನಾವು ಮಾತ್ರ ಪ್ರತಿ ವಿಷಯದಲ್ಲೂ ವಿರೋಧ ಮಾಡಿಕೊಂಡು ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿದ್ದೇವೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಬುಧವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಇಡೀ ವಿಶ್ವದಲ್ಲೇ ಮರೆಯಲಾಗದ ಮಾನವ ಸ್ವರೂಪದ ಮಹಾನ್ ಚೇತನವಾಗಿದ್ದು, ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ರಕ್ಷಣೆ ಪಡೆಯಲು ಅಂಬೇಡ್ಕರ್ ಕಾರಣವಾಗಿದ್ದಾರೆ. ಅವರ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ. ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ ಎಂದರು.

ಅಂಬೇಡ್ಕರ್ ಅವರು ತಮ್ಮ ಕುಟುಂಬವನ್ನು ತ್ಯಾಗ ಮಾಡಿ ದೇಶದ ಬಡಜನರ ಬದುಕಿಗೆ ಆಸರೆಯಾಗಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಇವತ್ತು ಅಪಮಾನ ಅಗೌರವ ತೋರುವ ಶಕ್ತಿಗಳಿಗೆ ತನ್ನಷ್ಟಕ್ಕೆ ತಾನೇ ಶಿಕ್ಷೆಯನ್ನು ದೇವರು ನೀಡುವಂತಾಗಲಿ. ಪ್ರಾಚೀನ ಕಾಲದಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಲೇ ಬಂದಿದೆ. ಅದು ಇಂದಿಗೂ ನಿಂತಿಲ್ಲ. ಸಂವಿಧಾನ ಇದ್ದರೂ ಹೆಸರಿಗಷ್ಟೆ ಎಲ್ಲರೂ ಒಂದೇ ಎನ್ನುವ ನೀತಿ ಇದೆ. ಆದರೆ, ನಿಜವಾಗಲೂ ಜಾತೀಯತೆ ಅತಿಯಾಗಿದೆ ಇದನ್ನು ಹೊಗಲಾಡಿಸಿ ನೆಮ್ಮದಿ ‌ಬದುಕು ಕಾಣಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ರಕ್ಷಣೆ ಮಾಡಿದರೆ ಬಿಜೆಪಿ ಸಂವಿಧಾನ ಬದಲಾವಣೆಗೆ ಮುಂದಾಗಿದೆ. ದೇಶದಲ್ಲಿ ಯಾವುದೇ ಚುನಾವಣೆ ಬಂದರೂ ಅಂಬೇಡ್ಕರ್ ಅವರ ಹೆಸರು ಹೇಳದೇ ಇರುವ ಪಕ್ಷಗಳು ಇಲ್ಲ ದಲಿತರ ಬಗ್ಗೆ ಗೌರವದಿಂದ ಕಾಣುವ ಕಾಂಗ್ರೆಸ್ ಪಕ್ಷದಿಂದ ಮುಂದೆ ಇಂಡಿಯಾ ಒಕ್ಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ಮಾಡುವ ಅವಕಾಶಗಳು ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗುತ್ತದೆ ಎಂದರು‌.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಚುನಾವಣೆ ಬಂದಾಗ ಮಾತ್ರವೇ ಸೀಮಿತಗೊಳಿಸದೇ ವರ್ಷದ 365 ದಿನವು ನೆನೆಯುವಂತಾಗಬೇಕು. ಜಯಂತಿಗೆ ಜಾತಿಯ ಬಣ್ಣ ಕಟ್ಟಬಾರದು. ಸಮಾಜದಲ್ಲಿ ಮೀಸಲಾತಿ ದಲಿತರಿಗೆ ಅಷ್ಟೇ ಸೀಮಿತವಲ್ಲ. ಸಮಾಜದಲ್ಲಿನ ಬಡವರಿಗೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ದಲಿತರು ಮತ್ತು ಮುಸ್ಲಿಮರು ಒಗ್ಗಟ್ಟಿನಿಂದ ಹೋಗಬೇಕು. ಆಗ ಮಾತ್ರವೇ ಸಮಸ್ಯೆಗೆ ಶೀಘ್ರದಲ್ಲಿ ಪರಿಹರಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಲೋಕೇಶ್, ದಸಂಸ ರಾಜ್ಯ ಸಂಚಾಲಕ ಮೋಹನ್ ರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಇನಾಯಿತ್ ಪಾಷ, ಪೀಸ್ ಮಂಜು, ನಾಗೇಂದ್ರ, ಖಯ್ತೂಂ, ಪ್ರವೀಣ್ ಮುಂತಾದವರು ಇದ್ದರು

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago