Categories: ಕೋಲಾರ

ಸಂವಿಧಾನ ಒಂದು ಜಾತಿಗೆ ಸೀಮಿತವಲ್ಲ, ಅದು ದೇಶಕ್ಕೆ ಸೀಮಿತವಾಗಿದೆ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಂವಿಧಾನವನ್ನು ಕೇವಲ ಒಂದು ಜಾತಿಗೆ ಸೀಮಿತವಲ್ಲ ಅದು ದೇಶಕ್ಕೆ ಸೀಮಿತವಾಗಿದೆ. ಅನ್ಯರಾಷ್ಟ್ರದ ಜನರು ನಮ್ಮ ದೇಶದ ಸಂವಿಧಾನದ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಹೊಂದಿದರೆ ನಾವು ಮಾತ್ರ ಪ್ರತಿ ವಿಷಯದಲ್ಲೂ ವಿರೋಧ ಮಾಡಿಕೊಂಡು ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿದ್ದೇವೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಬುಧವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಇಡೀ ವಿಶ್ವದಲ್ಲೇ ಮರೆಯಲಾಗದ ಮಾನವ ಸ್ವರೂಪದ ಮಹಾನ್ ಚೇತನವಾಗಿದ್ದು, ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ರಕ್ಷಣೆ ಪಡೆಯಲು ಅಂಬೇಡ್ಕರ್ ಕಾರಣವಾಗಿದ್ದಾರೆ. ಅವರ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ. ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ ಎಂದರು.

ಅಂಬೇಡ್ಕರ್ ಅವರು ತಮ್ಮ ಕುಟುಂಬವನ್ನು ತ್ಯಾಗ ಮಾಡಿ ದೇಶದ ಬಡಜನರ ಬದುಕಿಗೆ ಆಸರೆಯಾಗಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಇವತ್ತು ಅಪಮಾನ ಅಗೌರವ ತೋರುವ ಶಕ್ತಿಗಳಿಗೆ ತನ್ನಷ್ಟಕ್ಕೆ ತಾನೇ ಶಿಕ್ಷೆಯನ್ನು ದೇವರು ನೀಡುವಂತಾಗಲಿ. ಪ್ರಾಚೀನ ಕಾಲದಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಲೇ ಬಂದಿದೆ. ಅದು ಇಂದಿಗೂ ನಿಂತಿಲ್ಲ. ಸಂವಿಧಾನ ಇದ್ದರೂ ಹೆಸರಿಗಷ್ಟೆ ಎಲ್ಲರೂ ಒಂದೇ ಎನ್ನುವ ನೀತಿ ಇದೆ. ಆದರೆ, ನಿಜವಾಗಲೂ ಜಾತೀಯತೆ ಅತಿಯಾಗಿದೆ ಇದನ್ನು ಹೊಗಲಾಡಿಸಿ ನೆಮ್ಮದಿ ‌ಬದುಕು ಕಾಣಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ರಕ್ಷಣೆ ಮಾಡಿದರೆ ಬಿಜೆಪಿ ಸಂವಿಧಾನ ಬದಲಾವಣೆಗೆ ಮುಂದಾಗಿದೆ. ದೇಶದಲ್ಲಿ ಯಾವುದೇ ಚುನಾವಣೆ ಬಂದರೂ ಅಂಬೇಡ್ಕರ್ ಅವರ ಹೆಸರು ಹೇಳದೇ ಇರುವ ಪಕ್ಷಗಳು ಇಲ್ಲ ದಲಿತರ ಬಗ್ಗೆ ಗೌರವದಿಂದ ಕಾಣುವ ಕಾಂಗ್ರೆಸ್ ಪಕ್ಷದಿಂದ ಮುಂದೆ ಇಂಡಿಯಾ ಒಕ್ಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ಮಾಡುವ ಅವಕಾಶಗಳು ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗುತ್ತದೆ ಎಂದರು‌.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಚುನಾವಣೆ ಬಂದಾಗ ಮಾತ್ರವೇ ಸೀಮಿತಗೊಳಿಸದೇ ವರ್ಷದ 365 ದಿನವು ನೆನೆಯುವಂತಾಗಬೇಕು. ಜಯಂತಿಗೆ ಜಾತಿಯ ಬಣ್ಣ ಕಟ್ಟಬಾರದು. ಸಮಾಜದಲ್ಲಿ ಮೀಸಲಾತಿ ದಲಿತರಿಗೆ ಅಷ್ಟೇ ಸೀಮಿತವಲ್ಲ. ಸಮಾಜದಲ್ಲಿನ ಬಡವರಿಗೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ದಲಿತರು ಮತ್ತು ಮುಸ್ಲಿಮರು ಒಗ್ಗಟ್ಟಿನಿಂದ ಹೋಗಬೇಕು. ಆಗ ಮಾತ್ರವೇ ಸಮಸ್ಯೆಗೆ ಶೀಘ್ರದಲ್ಲಿ ಪರಿಹರಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಲೋಕೇಶ್, ದಸಂಸ ರಾಜ್ಯ ಸಂಚಾಲಕ ಮೋಹನ್ ರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಇನಾಯಿತ್ ಪಾಷ, ಪೀಸ್ ಮಂಜು, ನಾಗೇಂದ್ರ, ಖಯ್ತೂಂ, ಪ್ರವೀಣ್ ಮುಂತಾದವರು ಇದ್ದರು

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

7 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

8 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

12 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

13 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

19 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

20 hours ago