Categories: ಕೋಲಾರ

ಸಂವಿಧಾನ ಒಂದು ಜಾತಿಗೆ ಸೀಮಿತವಲ್ಲ, ಅದು ದೇಶಕ್ಕೆ ಸೀಮಿತವಾಗಿದೆ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಂವಿಧಾನವನ್ನು ಕೇವಲ ಒಂದು ಜಾತಿಗೆ ಸೀಮಿತವಲ್ಲ ಅದು ದೇಶಕ್ಕೆ ಸೀಮಿತವಾಗಿದೆ. ಅನ್ಯರಾಷ್ಟ್ರದ ಜನರು ನಮ್ಮ ದೇಶದ ಸಂವಿಧಾನದ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಹೊಂದಿದರೆ ನಾವು ಮಾತ್ರ ಪ್ರತಿ ವಿಷಯದಲ್ಲೂ ವಿರೋಧ ಮಾಡಿಕೊಂಡು ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿದ್ದೇವೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಬುಧವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಇಡೀ ವಿಶ್ವದಲ್ಲೇ ಮರೆಯಲಾಗದ ಮಾನವ ಸ್ವರೂಪದ ಮಹಾನ್ ಚೇತನವಾಗಿದ್ದು, ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ರಕ್ಷಣೆ ಪಡೆಯಲು ಅಂಬೇಡ್ಕರ್ ಕಾರಣವಾಗಿದ್ದಾರೆ. ಅವರ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ. ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ ಎಂದರು.

ಅಂಬೇಡ್ಕರ್ ಅವರು ತಮ್ಮ ಕುಟುಂಬವನ್ನು ತ್ಯಾಗ ಮಾಡಿ ದೇಶದ ಬಡಜನರ ಬದುಕಿಗೆ ಆಸರೆಯಾಗಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಇವತ್ತು ಅಪಮಾನ ಅಗೌರವ ತೋರುವ ಶಕ್ತಿಗಳಿಗೆ ತನ್ನಷ್ಟಕ್ಕೆ ತಾನೇ ಶಿಕ್ಷೆಯನ್ನು ದೇವರು ನೀಡುವಂತಾಗಲಿ. ಪ್ರಾಚೀನ ಕಾಲದಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಲೇ ಬಂದಿದೆ. ಅದು ಇಂದಿಗೂ ನಿಂತಿಲ್ಲ. ಸಂವಿಧಾನ ಇದ್ದರೂ ಹೆಸರಿಗಷ್ಟೆ ಎಲ್ಲರೂ ಒಂದೇ ಎನ್ನುವ ನೀತಿ ಇದೆ. ಆದರೆ, ನಿಜವಾಗಲೂ ಜಾತೀಯತೆ ಅತಿಯಾಗಿದೆ ಇದನ್ನು ಹೊಗಲಾಡಿಸಿ ನೆಮ್ಮದಿ ‌ಬದುಕು ಕಾಣಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ರಕ್ಷಣೆ ಮಾಡಿದರೆ ಬಿಜೆಪಿ ಸಂವಿಧಾನ ಬದಲಾವಣೆಗೆ ಮುಂದಾಗಿದೆ. ದೇಶದಲ್ಲಿ ಯಾವುದೇ ಚುನಾವಣೆ ಬಂದರೂ ಅಂಬೇಡ್ಕರ್ ಅವರ ಹೆಸರು ಹೇಳದೇ ಇರುವ ಪಕ್ಷಗಳು ಇಲ್ಲ ದಲಿತರ ಬಗ್ಗೆ ಗೌರವದಿಂದ ಕಾಣುವ ಕಾಂಗ್ರೆಸ್ ಪಕ್ಷದಿಂದ ಮುಂದೆ ಇಂಡಿಯಾ ಒಕ್ಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ಮಾಡುವ ಅವಕಾಶಗಳು ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗುತ್ತದೆ ಎಂದರು‌.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಚುನಾವಣೆ ಬಂದಾಗ ಮಾತ್ರವೇ ಸೀಮಿತಗೊಳಿಸದೇ ವರ್ಷದ 365 ದಿನವು ನೆನೆಯುವಂತಾಗಬೇಕು. ಜಯಂತಿಗೆ ಜಾತಿಯ ಬಣ್ಣ ಕಟ್ಟಬಾರದು. ಸಮಾಜದಲ್ಲಿ ಮೀಸಲಾತಿ ದಲಿತರಿಗೆ ಅಷ್ಟೇ ಸೀಮಿತವಲ್ಲ. ಸಮಾಜದಲ್ಲಿನ ಬಡವರಿಗೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ದಲಿತರು ಮತ್ತು ಮುಸ್ಲಿಮರು ಒಗ್ಗಟ್ಟಿನಿಂದ ಹೋಗಬೇಕು. ಆಗ ಮಾತ್ರವೇ ಸಮಸ್ಯೆಗೆ ಶೀಘ್ರದಲ್ಲಿ ಪರಿಹರಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಲೋಕೇಶ್, ದಸಂಸ ರಾಜ್ಯ ಸಂಚಾಲಕ ಮೋಹನ್ ರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಇನಾಯಿತ್ ಪಾಷ, ಪೀಸ್ ಮಂಜು, ನಾಗೇಂದ್ರ, ಖಯ್ತೂಂ, ಪ್ರವೀಣ್ ಮುಂತಾದವರು ಇದ್ದರು

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 hour ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago