ಕೋಲಾರ: ಸಂವಿಧಾನವನ್ನು ಕೇವಲ ಒಂದು ಜಾತಿಗೆ ಸೀಮಿತವಲ್ಲ ಅದು ದೇಶಕ್ಕೆ ಸೀಮಿತವಾಗಿದೆ. ಅನ್ಯರಾಷ್ಟ್ರದ ಜನರು ನಮ್ಮ ದೇಶದ ಸಂವಿಧಾನದ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಹೊಂದಿದರೆ ನಾವು ಮಾತ್ರ ಪ್ರತಿ ವಿಷಯದಲ್ಲೂ ವಿರೋಧ ಮಾಡಿಕೊಂಡು ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿದ್ದೇವೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಬುಧವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಇಡೀ ವಿಶ್ವದಲ್ಲೇ ಮರೆಯಲಾಗದ ಮಾನವ ಸ್ವರೂಪದ ಮಹಾನ್ ಚೇತನವಾಗಿದ್ದು, ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ರಕ್ಷಣೆ ಪಡೆಯಲು ಅಂಬೇಡ್ಕರ್ ಕಾರಣವಾಗಿದ್ದಾರೆ. ಅವರ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ. ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ ಎಂದರು.
ಅಂಬೇಡ್ಕರ್ ಅವರು ತಮ್ಮ ಕುಟುಂಬವನ್ನು ತ್ಯಾಗ ಮಾಡಿ ದೇಶದ ಬಡಜನರ ಬದುಕಿಗೆ ಆಸರೆಯಾಗಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಇವತ್ತು ಅಪಮಾನ ಅಗೌರವ ತೋರುವ ಶಕ್ತಿಗಳಿಗೆ ತನ್ನಷ್ಟಕ್ಕೆ ತಾನೇ ಶಿಕ್ಷೆಯನ್ನು ದೇವರು ನೀಡುವಂತಾಗಲಿ. ಪ್ರಾಚೀನ ಕಾಲದಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಲೇ ಬಂದಿದೆ. ಅದು ಇಂದಿಗೂ ನಿಂತಿಲ್ಲ. ಸಂವಿಧಾನ ಇದ್ದರೂ ಹೆಸರಿಗಷ್ಟೆ ಎಲ್ಲರೂ ಒಂದೇ ಎನ್ನುವ ನೀತಿ ಇದೆ. ಆದರೆ, ನಿಜವಾಗಲೂ ಜಾತೀಯತೆ ಅತಿಯಾಗಿದೆ ಇದನ್ನು ಹೊಗಲಾಡಿಸಿ ನೆಮ್ಮದಿ ಬದುಕು ಕಾಣಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ರಕ್ಷಣೆ ಮಾಡಿದರೆ ಬಿಜೆಪಿ ಸಂವಿಧಾನ ಬದಲಾವಣೆಗೆ ಮುಂದಾಗಿದೆ. ದೇಶದಲ್ಲಿ ಯಾವುದೇ ಚುನಾವಣೆ ಬಂದರೂ ಅಂಬೇಡ್ಕರ್ ಅವರ ಹೆಸರು ಹೇಳದೇ ಇರುವ ಪಕ್ಷಗಳು ಇಲ್ಲ ದಲಿತರ ಬಗ್ಗೆ ಗೌರವದಿಂದ ಕಾಣುವ ಕಾಂಗ್ರೆಸ್ ಪಕ್ಷದಿಂದ ಮುಂದೆ ಇಂಡಿಯಾ ಒಕ್ಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ಮಾಡುವ ಅವಕಾಶಗಳು ಇದ್ದು, ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಚುನಾವಣೆ ಬಂದಾಗ ಮಾತ್ರವೇ ಸೀಮಿತಗೊಳಿಸದೇ ವರ್ಷದ 365 ದಿನವು ನೆನೆಯುವಂತಾಗಬೇಕು. ಜಯಂತಿಗೆ ಜಾತಿಯ ಬಣ್ಣ ಕಟ್ಟಬಾರದು. ಸಮಾಜದಲ್ಲಿ ಮೀಸಲಾತಿ ದಲಿತರಿಗೆ ಅಷ್ಟೇ ಸೀಮಿತವಲ್ಲ. ಸಮಾಜದಲ್ಲಿನ ಬಡವರಿಗೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ದಲಿತರು ಮತ್ತು ಮುಸ್ಲಿಮರು ಒಗ್ಗಟ್ಟಿನಿಂದ ಹೋಗಬೇಕು. ಆಗ ಮಾತ್ರವೇ ಸಮಸ್ಯೆಗೆ ಶೀಘ್ರದಲ್ಲಿ ಪರಿಹರಿಸಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಲೋಕೇಶ್, ದಸಂಸ ರಾಜ್ಯ ಸಂಚಾಲಕ ಮೋಹನ್ ರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಇನಾಯಿತ್ ಪಾಷ, ಪೀಸ್ ಮಂಜು, ನಾಗೇಂದ್ರ, ಖಯ್ತೂಂ, ಪ್ರವೀಣ್ ಮುಂತಾದವರು ಇದ್ದರು
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…