ಸಂವಿಧಾನ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿಚಾರ: ಕಾಂಗ್ರೆಸ್ ಆಕ್ರೋಶ

ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತದ ಅಗತ್ಯ ಇದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ಅನಂತ್ ಕುಮಾರ್ ಹೆಗಡೆ ಹೇಳಿಕೆ ಸಂವಿಧಾನದಕ್ಕೆ ಮಾಡಿದ ಅಪಮಾನ ಹಾಗೂ ಅಕ್ಷಮ್ಯ ಅಪರಾಧ,  ಕಾಂಗ್ರೆಸ್ ಪಕ್ಷವು ಇಂತಹ ಕ್ಷುಲ್ಲಕ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ, ಇದರ ವಿರುದ್ಧ ಕಾಂಗ್ರೆಸ್ ವತಿಯಿಂದ ತೀವ್ರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗಡೆ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದರು.

ಪದೇ ಪದೇ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನ ನೀಡುವ ಮೂಲಕ ಜನರಲ್ಲಿ ಗೊಂದಲ ಹಾಗೂ ದ್ವೇಷಮಯ ವಾತವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿರುವುದನ್ನ ಬಿಜೆಪಿ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಇದುವರೆಗೂ ವಿರೋಧಿಸಿಲ್ಲ. 8 ದಿನಗಳೊಳಗಾಗಿ ಅನಂತ ಕುಮಾರ್ ಹೆಗಡೆ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.

ಅವನೊಬ್ಬ ಅಯೋಗ್ಯ ಅವನಿಗೆ ನಾನು ಗೌರವ ಕೊಡುವುದಿಲ್ಲ, ಗೌರವ ಕೊಡುವಂತಹದನ್ನು ಅವನು ಉಳಿಸಿಕೊಂಡಿಲ್ಲ. ಅವನು ಸಂಸದಾರಾಗಿ ಪ್ರಮಾಣವಚನ ಸ್ಪೀಕಾರ ಮಾಡಿದ್ದು, ಇದೇ ಸಂವಿದಾನದ ಅಡಿಯಲ್ಲಿ ಅನ್ನೋದು ಮರೆತು ಇವತ್ತು ಸಂವಿದಾನದ ವಿರೋದವಾಗಿ ಮಾತನಾಡುತ್ತಾನೆ ಎಂದು ಎರಕವಚನದಲ್ಲೇ ವಾಗ್ದಾಳಿ ನಡೆಸಿದರು.

ಚುನಾವಣೆ ಬಾಂಡ್ ಬಹಿರಂಗ ಮಾಡಿದರೆ ಬಿಜೆಪಿಗೆ ಭಾರೀ ಮುಖಭಂಗ ಆಗುತ್ತದೆ. ಹೀಗಾಗಿ ಬಿಜೆಪಿಯು ಜನರ ಗಮನವನ್ನ ಬೇರೆ ಕಡೆ ತಪ್ಪಿಸಲು ಸಿಎಎ ಜಾರಿ ಮಾಡಿದೆ ಎಂದರು.

ಈ ವೇಳೆ ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೆಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

4 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

6 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

8 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

13 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

16 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago