ಸಂವಿಧಾನ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿಚಾರ: ಕಾಂಗ್ರೆಸ್ ಆಕ್ರೋಶ

ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತದ ಅಗತ್ಯ ಇದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ಅನಂತ್ ಕುಮಾರ್ ಹೆಗಡೆ ಹೇಳಿಕೆ ಸಂವಿಧಾನದಕ್ಕೆ ಮಾಡಿದ ಅಪಮಾನ ಹಾಗೂ ಅಕ್ಷಮ್ಯ ಅಪರಾಧ,  ಕಾಂಗ್ರೆಸ್ ಪಕ್ಷವು ಇಂತಹ ಕ್ಷುಲ್ಲಕ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ, ಇದರ ವಿರುದ್ಧ ಕಾಂಗ್ರೆಸ್ ವತಿಯಿಂದ ತೀವ್ರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗಡೆ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದರು.

ಪದೇ ಪದೇ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನ ನೀಡುವ ಮೂಲಕ ಜನರಲ್ಲಿ ಗೊಂದಲ ಹಾಗೂ ದ್ವೇಷಮಯ ವಾತವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿರುವುದನ್ನ ಬಿಜೆಪಿ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಇದುವರೆಗೂ ವಿರೋಧಿಸಿಲ್ಲ. 8 ದಿನಗಳೊಳಗಾಗಿ ಅನಂತ ಕುಮಾರ್ ಹೆಗಡೆ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.

ಅವನೊಬ್ಬ ಅಯೋಗ್ಯ ಅವನಿಗೆ ನಾನು ಗೌರವ ಕೊಡುವುದಿಲ್ಲ, ಗೌರವ ಕೊಡುವಂತಹದನ್ನು ಅವನು ಉಳಿಸಿಕೊಂಡಿಲ್ಲ. ಅವನು ಸಂಸದಾರಾಗಿ ಪ್ರಮಾಣವಚನ ಸ್ಪೀಕಾರ ಮಾಡಿದ್ದು, ಇದೇ ಸಂವಿದಾನದ ಅಡಿಯಲ್ಲಿ ಅನ್ನೋದು ಮರೆತು ಇವತ್ತು ಸಂವಿದಾನದ ವಿರೋದವಾಗಿ ಮಾತನಾಡುತ್ತಾನೆ ಎಂದು ಎರಕವಚನದಲ್ಲೇ ವಾಗ್ದಾಳಿ ನಡೆಸಿದರು.

ಚುನಾವಣೆ ಬಾಂಡ್ ಬಹಿರಂಗ ಮಾಡಿದರೆ ಬಿಜೆಪಿಗೆ ಭಾರೀ ಮುಖಭಂಗ ಆಗುತ್ತದೆ. ಹೀಗಾಗಿ ಬಿಜೆಪಿಯು ಜನರ ಗಮನವನ್ನ ಬೇರೆ ಕಡೆ ತಪ್ಪಿಸಲು ಸಿಎಎ ಜಾರಿ ಮಾಡಿದೆ ಎಂದರು.

ಈ ವೇಳೆ ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೆಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 hour ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

4 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

5 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

16 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

19 hours ago