ಸಂವಿಧಾನ ಜಾಗೃತಿ ಜಾಥಗೆ ಅಗತ್ಯ ಸಿದ್ಧತೆ ಕೈಗೊಳ್ಳಿ:‌ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ  ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.

ಜಾಗೃತಿ ಜಾಥದ ಸ್ಥಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ರಚಿಸಬೇಕು,  ಸಂವಿಧಾನ ಆಶಯಗಳನ್ನು ಒಳಗೊಂಡ ಸ್ಥಬ್ಧಚಿತ್ರ  ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥ ನಡೆಯಬೇಕು.

ಜಾಗೃತಿ ಜಾಥ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು.

ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

19 seconds ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

2 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

15 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

16 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

20 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

23 hours ago