ಸಂವಿಧಾನ ಜಾಗೃತಿ ಜಾಥಗೆ ಅಗತ್ಯ ಸಿದ್ಧತೆ ಕೈಗೊಳ್ಳಿ:‌ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ  ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.

ಜಾಗೃತಿ ಜಾಥದ ಸ್ಥಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ರಚಿಸಬೇಕು,  ಸಂವಿಧಾನ ಆಶಯಗಳನ್ನು ಒಳಗೊಂಡ ಸ್ಥಬ್ಧಚಿತ್ರ  ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥ ನಡೆಯಬೇಕು.

ಜಾಗೃತಿ ಜಾಥ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು.

ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

2 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

14 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

14 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago