ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.
ಜಾಗೃತಿ ಜಾಥದ ಸ್ಥಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ರಚಿಸಬೇಕು, ಸಂವಿಧಾನ ಆಶಯಗಳನ್ನು ಒಳಗೊಂಡ ಸ್ಥಬ್ಧಚಿತ್ರ ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥ ನಡೆಯಬೇಕು.
ಜಾಗೃತಿ ಜಾಥ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು.
ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…