ಕರ್ನಾಟಕ ಸರ್ಕಾರದ ವತಿಯಿಂದ ಭಾರತದ ಸಂವಿಧಾನವು ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಿಂದ ಫೆಬ್ರವರಿ 23 ರವರೆಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜನವರಿ 26 ರಿಂದ ಫೆಬ್ರವರಿ 01 ರವರೆಗೆ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ಫೆಬ್ರವರಿ 02 ರಿಂದ 09 ರವರೆಗೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಫೆಬ್ರವರಿ 10 ರಿಂದ ಫೆಬ್ರವರಿ 17 ರವರೆಗೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ಫೆಬ್ರವರಿ 18 ರಿಂದ ಫೆಬ್ರವರಿ 23 ರವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆ ಈಗಾಗಲೇ ದೇವನಹಳ್ಳಿ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಬೈಕ್ ರ್ಯಾಲಿ, ಸೈಕಲ್ ರ್ಯಾಲಿ, ಟ್ರಾಕ್ಟರ್ ರ್ಯಾಲಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರದಿಂದ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬೈಕ್ ರ್ಯಾಲಿ, ಸೈಕಲ್ ರ್ಯಾಲಿ, ಟ್ರಾಕ್ಟರ್ ರ್ಯಾಲಿ, ರಂಗೋಲಿ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವೇಷಭೂಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ, ದಲಿತ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ (DD social welfare Bangalore rural), ಫೇಸ್ಬುಕ್ (Ddswd rural), ಇನ್ಸ್ಟಾಗ್ರಾಮ್ (ddswdrural) ಈ ಖಾತೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಪೋಸ್ಟ್ ಮಾಡಲಾಗುತ್ತಿದ್ದು, ಖಾತೆಗಳನ್ನು ಫಾಲೋ ಮಾಡಿ ಪ್ರತಿದಿನ ಪೋಸ್ಟ್ ಲೈಕ್ ಮತ್ತು ಶೇರ್ ಮಾಡುವ ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್.ಅನುರಾಧ ರವರು ಮನವಿ ಮಾಡಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…