ಸಂವಿಧಾನ ಜಾಗೃತಿ ಜಾಥವನ್ನು ಯಶಸ್ವಿಗೊಳಿಸಲು ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧ ಕರೆ

ಕರ್ನಾಟಕ ಸರ್ಕಾರದ ವತಿಯಿಂದ ಭಾರತದ ಸಂವಿಧಾನವು ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಿಂದ ಫೆಬ್ರವರಿ 23 ರವರೆಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜನವರಿ 26 ರಿಂದ ಫೆಬ್ರವರಿ 01 ರವರೆಗೆ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ಫೆಬ್ರವರಿ 02 ರಿಂದ 09 ರವರೆಗೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಫೆಬ್ರವರಿ 10 ರಿಂದ ಫೆಬ್ರವರಿ 17 ರವರೆಗೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ಫೆಬ್ರವರಿ 18 ರಿಂದ ಫೆಬ್ರವರಿ 23 ರವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಈಗಾಗಲೇ ದೇವನಹಳ್ಳಿ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಬೈಕ್ ರ‍್ಯಾಲಿ, ಸೈಕಲ್ ರ‍್ಯಾಲಿ, ಟ್ರಾಕ್ಟರ್ ರ‍್ಯಾಲಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರದಿಂದ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ.

ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬೈಕ್ ರ‍್ಯಾಲಿ, ಸೈಕಲ್ ರ‍್ಯಾಲಿ, ಟ್ರಾಕ್ಟರ್ ರ‍್ಯಾಲಿ, ರಂಗೋಲಿ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವೇಷಭೂಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ, ದಲಿತ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ (DD social welfare Bangalore rural), ಫೇಸ್ಬುಕ್ (Ddswd rural), ಇನ್ಸ್ಟಾಗ್ರಾಮ್ (ddswdrural) ಈ ಖಾತೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಪೋಸ್ಟ್ ಮಾಡಲಾಗುತ್ತಿದ್ದು, ಖಾತೆಗಳನ್ನು ಫಾಲೋ ಮಾಡಿ ಪ್ರತಿದಿನ ಪೋಸ್ಟ್ ಲೈಕ್ ಮತ್ತು ಶೇರ್ ಮಾಡುವ ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್.ಅನುರಾಧ ರವರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

8 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago