ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ಧೂರಿ ಸ್ವಾಗತ ಕೋರಿದ ಮಜರಾಹೊಸಹಳ್ಳಿ ಗ್ರಾಮಸ್ಥರು

ಸಂವಿಧಾನ ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹಬಾಳ್ವೆ ಹಾಗೂ ಭಾತೃತ್ವ ಭಾವನೆಯನ್ನು  ಜನತೆಯಲ್ಲಿ ಮೂಡಿಸಲು ಹೊರಟಿರುವ ಸಂವಿಧಾನ ಜಾಗೃತಿ ಜಾಥಾವು ತಾಲೂಕಿನಲ್ಲಿ 7ನೇ ದಿನಕ್ಕೆ ಕಾಲಿಟ್ಟಿದ್ದು, ಜಾಗೃತಿ ರಥವು ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಅದೇ ರೀತಿ ಗುರುವಾರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಸ್ಥರು ಹಾಗಾ ಗ್ರಾಮ ಪಂಚಾಯಿತಿ ಪಿಡಿಒ ರವೀಂದ್ರ ಅವರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಂಭ್ರಮದ ಅದ್ಧೂರಿ ಕೋರಿದರು.

ಈ ವೇಳೆ ಗ್ರಾಪಂ ಪಿಡಿಒ ರವೀಂದ್ರ ಮಾತನಾಡಿ, ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಎಷ್ಟು ಮುಖ್ಯವೋ ಕರ್ತವ್ಯ ಕೂಡ ಅಷ್ಟೇ ಮುಖ್ಯ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದರು.

ಮಜರಾಹೋಸಹಳ್ಳಿ ಗ್ರಾಮಕ್ಕೆ ಜಾಗೃತಿ ಜಾಥಾ ಆಗಮಿಸುತ್ತಿದ್ದಂತೆ ಸ್ಥಬ್ಧಚಿತ್ರ ರಥಕ್ಕೆ ಮೇಲೆ ಪುಷ್ಪ ಮಳೆ ಸುರಿಸುವ ಮೂಲಕ ಭವ್ಯ ಸ್ವಾಗತ ಕೋರಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಾಲಾ ಮಕ್ಕಳು ವೆಲ್ ಕಮ್ ನಾಮಫಲಕ ಹಿಡಿದು ಸ್ವಾಗತಿಸಿದ್ದು ವಿಶೇಷವಾಗಿತ್ತು. ರಾಷ್ಟ್ರ ನಾಯಕರ ವೇಷಧರಿಸಿದ ಮಕ್ಕಳು, ನಮ್ಮ ಸಂವಿಧಾನ ನಮ್ಮ ಹೆಮ್ಮೆ, ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಸಂವಿಧಾನ ಕುರಿತು ಭಿತ್ತಿಪತ್ರ ಹಿಡಿದು ಜಾಗೃತಿ ಮೂಡಿಸಿದರು.

ಈ ವೇಳೆ ನಿಕಟ ಪೂರ್ವ ಗ್ರಾ.ಪಂ ಅಧ್ಯಕ್ಷ ವಿಜಿಕುಮಾರ್ ಉಪಾಧ್ಯಕ್ಷರಾದ ಲಕ್ಷಮ್ಮ ಸದಸ್ಯರಾದ ಸಂದೇಶ್, ನಾರಾಯಣಪ್ಪ, ಮಾರಪ್ಪ, ದೇವರಾಜು ಸೇರಿದಂತೆ ಗ್ರಾಮದ ಗಣ್ಯರು ಉಪಸ್ಥತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago