ಸಂವಿಧಾನ ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹಬಾಳ್ವೆ ಹಾಗೂ ಭಾತೃತ್ವ ಭಾವನೆಯನ್ನು ಜನತೆಯಲ್ಲಿ ಮೂಡಿಸಲು ಹೊರಟಿರುವ ಸಂವಿಧಾನ ಜಾಗೃತಿ ಜಾಥಾವು ತಾಲೂಕಿನಲ್ಲಿ 7ನೇ ದಿನಕ್ಕೆ ಕಾಲಿಟ್ಟಿದ್ದು, ಜಾಗೃತಿ ರಥವು ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಅದೇ ರೀತಿ ಗುರುವಾರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಸ್ಥರು ಹಾಗಾ ಗ್ರಾಮ ಪಂಚಾಯಿತಿ ಪಿಡಿಒ ರವೀಂದ್ರ ಅವರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಂಭ್ರಮದ ಅದ್ಧೂರಿ ಕೋರಿದರು.
ಈ ವೇಳೆ ಗ್ರಾಪಂ ಪಿಡಿಒ ರವೀಂದ್ರ ಮಾತನಾಡಿ, ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಎಷ್ಟು ಮುಖ್ಯವೋ ಕರ್ತವ್ಯ ಕೂಡ ಅಷ್ಟೇ ಮುಖ್ಯ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದರು.
ಮಜರಾಹೋಸಹಳ್ಳಿ ಗ್ರಾಮಕ್ಕೆ ಜಾಗೃತಿ ಜಾಥಾ ಆಗಮಿಸುತ್ತಿದ್ದಂತೆ ಸ್ಥಬ್ಧಚಿತ್ರ ರಥಕ್ಕೆ ಮೇಲೆ ಪುಷ್ಪ ಮಳೆ ಸುರಿಸುವ ಮೂಲಕ ಭವ್ಯ ಸ್ವಾಗತ ಕೋರಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಾಲಾ ಮಕ್ಕಳು ವೆಲ್ ಕಮ್ ನಾಮಫಲಕ ಹಿಡಿದು ಸ್ವಾಗತಿಸಿದ್ದು ವಿಶೇಷವಾಗಿತ್ತು. ರಾಷ್ಟ್ರ ನಾಯಕರ ವೇಷಧರಿಸಿದ ಮಕ್ಕಳು, ನಮ್ಮ ಸಂವಿಧಾನ ನಮ್ಮ ಹೆಮ್ಮೆ, ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಸಂವಿಧಾನ ಕುರಿತು ಭಿತ್ತಿಪತ್ರ ಹಿಡಿದು ಜಾಗೃತಿ ಮೂಡಿಸಿದರು.
ಈ ವೇಳೆ ನಿಕಟ ಪೂರ್ವ ಗ್ರಾ.ಪಂ ಅಧ್ಯಕ್ಷ ವಿಜಿಕುಮಾರ್ ಉಪಾಧ್ಯಕ್ಷರಾದ ಲಕ್ಷಮ್ಮ ಸದಸ್ಯರಾದ ಸಂದೇಶ್, ನಾರಾಯಣಪ್ಪ, ಮಾರಪ್ಪ, ದೇವರಾಜು ಸೇರಿದಂತೆ ಗ್ರಾಮದ ಗಣ್ಯರು ಉಪಸ್ಥತರಿದ್ದರು.
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…