ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ಧೂರಿ ಸ್ವಾಗತ ಕೋರಿದ ಮಜರಾಹೊಸಹಳ್ಳಿ ಗ್ರಾಮಸ್ಥರು

ಸಂವಿಧಾನ ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹಬಾಳ್ವೆ ಹಾಗೂ ಭಾತೃತ್ವ ಭಾವನೆಯನ್ನು  ಜನತೆಯಲ್ಲಿ ಮೂಡಿಸಲು ಹೊರಟಿರುವ ಸಂವಿಧಾನ ಜಾಗೃತಿ ಜಾಥಾವು ತಾಲೂಕಿನಲ್ಲಿ 7ನೇ ದಿನಕ್ಕೆ ಕಾಲಿಟ್ಟಿದ್ದು, ಜಾಗೃತಿ ರಥವು ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಅದೇ ರೀತಿ ಗುರುವಾರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಸ್ಥರು ಹಾಗಾ ಗ್ರಾಮ ಪಂಚಾಯಿತಿ ಪಿಡಿಒ ರವೀಂದ್ರ ಅವರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಂಭ್ರಮದ ಅದ್ಧೂರಿ ಕೋರಿದರು.

ಈ ವೇಳೆ ಗ್ರಾಪಂ ಪಿಡಿಒ ರವೀಂದ್ರ ಮಾತನಾಡಿ, ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಎಷ್ಟು ಮುಖ್ಯವೋ ಕರ್ತವ್ಯ ಕೂಡ ಅಷ್ಟೇ ಮುಖ್ಯ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದರು.

ಮಜರಾಹೋಸಹಳ್ಳಿ ಗ್ರಾಮಕ್ಕೆ ಜಾಗೃತಿ ಜಾಥಾ ಆಗಮಿಸುತ್ತಿದ್ದಂತೆ ಸ್ಥಬ್ಧಚಿತ್ರ ರಥಕ್ಕೆ ಮೇಲೆ ಪುಷ್ಪ ಮಳೆ ಸುರಿಸುವ ಮೂಲಕ ಭವ್ಯ ಸ್ವಾಗತ ಕೋರಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಾಲಾ ಮಕ್ಕಳು ವೆಲ್ ಕಮ್ ನಾಮಫಲಕ ಹಿಡಿದು ಸ್ವಾಗತಿಸಿದ್ದು ವಿಶೇಷವಾಗಿತ್ತು. ರಾಷ್ಟ್ರ ನಾಯಕರ ವೇಷಧರಿಸಿದ ಮಕ್ಕಳು, ನಮ್ಮ ಸಂವಿಧಾನ ನಮ್ಮ ಹೆಮ್ಮೆ, ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಸಂವಿಧಾನ ಕುರಿತು ಭಿತ್ತಿಪತ್ರ ಹಿಡಿದು ಜಾಗೃತಿ ಮೂಡಿಸಿದರು.

ಈ ವೇಳೆ ನಿಕಟ ಪೂರ್ವ ಗ್ರಾ.ಪಂ ಅಧ್ಯಕ್ಷ ವಿಜಿಕುಮಾರ್ ಉಪಾಧ್ಯಕ್ಷರಾದ ಲಕ್ಷಮ್ಮ ಸದಸ್ಯರಾದ ಸಂದೇಶ್, ನಾರಾಯಣಪ್ಪ, ಮಾರಪ್ಪ, ದೇವರಾಜು ಸೇರಿದಂತೆ ಗ್ರಾಮದ ಗಣ್ಯರು ಉಪಸ್ಥತರಿದ್ದರು.

Ramesh Babu

Journalist

Recent Posts

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

3 hours ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

4 hours ago

ಮೊಹರಂ ಅಂಗವಾಗಿ ಕಿಲ್ಲಾ ಮಸೀದಿಯಲ್ಲಿ ಶಿಯಾ ಮುಸ್ಲಿಮರ ಹಸೇನ್–ಹುಸೇನ್ ಆಚರಣೆ

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ…

6 hours ago

ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ: ಆರ್.ಆರ್. ನಗರದ SPARSH ಆಸ್ಪತ್ರೆಯಲ್ಲಿ 5 ವಿಶೇಷ ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

ಬೆಂಗಳೂರು, ಜುಲೈ 2026: ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ-2026ರ ಅಂಗವಾಗಿ, ಬೆಂಗಳೂರಿನ ಆರ್.ಆರ್. ನಗರದ ಸ್ಪರ್ಶ್ ಆಸ್ಪತ್ರೆ ಸಂಕೀರ್ಣ ಪುನರ್‌ನಿರ್ಮಾಣ,…

9 hours ago

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ; ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ…

11 hours ago

ಮಕ್ಕಳ ನಡುವೆ ಕಾಣಿಸಿಕೊಂಡ 5 ಅಡಿ ನಾಗರಹಾವು: ಉರಗ ರಕ್ಷಕರಿಂದ ಸುರಕ್ಷಿತ ರಕ್ಷಣೆ: ಮಕ್ಕಳು ಸುರಕ್ಷಿತ

ಬೆಂಗಳೂರು: ಹೆಸರಘಟ್ಟ ಹೋಬಳಿಯ ತೋಟಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10.50ರ ವೇಳೆಗೆ ಮನೆಯೊಳಗೆ ನುಗ್ಗಿದ್ದ ಸುಮಾರು 5 ಅಡಿ…

16 hours ago