ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಂವಿಧಾನ ಜಾಗೃತಿ ಮೂಡಿಸುವಂತಹ ರಥವನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿ, ಕಳಶಗಳನ್ನು ಹೊತ್ತು ಕಾಲ್ನಡಿಗೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.
ಇದೇ ಸಂದರ್ಭದಲ್ಲಿ ವಿವಿಧ ಕಲಾತಂಡಗಳ ಮೂಲಕ, ವಿದ್ಯಾರ್ಥಿಗಳನ್ನೊಳಗೊಂಡಂತೆ ಫ್ಲಾಶ್ ಕಾರ್ಡನ್ನು ಉಪಯೋಗಿಸುವ ಮೂಲಕ ಅಂಬೇಡ್ಕರ್ ಅವರ ಹಿತ ನುಡಿಗಳು ಅಶೋಕ್ತಿಗಳನ್ನು ತೋರಿಸುವ ಹಾಗೂ ಸಂವಿಧಾನದ ಹಕ್ಕು ಕರ್ತವ್ಯಗಳ ಅರಿವು ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ನಂತರ ಸಂವಿಧಾನ ಪೀಠಿಕೆಯನ್ನು ಗ್ರಾಮಸ್ಥರಿಗೆ ಬೋಧಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಬಗ್ಗೆ ಭಾಷಣ ಮಾಡಿಸಲಾಯಿತು.
ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಹೆಗ್ಗಡಿಹಳ್ಳಿ ಗ್ರಾ.ಪಂ. ಸದಸ್ಯ ಮುನಿಕೃಷ್ಣಪ್ಪ, ಸ್ವಾತಂತ್ರ್ಯ ಬಂದಾಗಿನಿಂದಲೂ ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ಸಂವಿಧಾನದಿಂದಲೇ ನಾವೆಲ್ಲ ಜೀವಿಸುತ್ತಿದ್ದೇವೆ. ಜನಸಾಮಾನ್ಯರಿಗೆ ಎಲ್ಲ ರೀತಿಯ ಸ್ಥಾನಮಾನ ನೀಡಿರುವ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಸ್ವಾತಂತ್ರ್ಯ ಬಂದಾಗ ಎಷ್ಟು ಸಂಭ್ರಮ ಪಟ್ಟಿದ್ದೇವೋ ಅದೇ ರೀತಿ ಸಂಭ್ರಮದ ವಾತಾವರಣ ಇಲ್ಲಿ ಮನೆ ಮಾಡಿದೆ ಎಂದು ಹೇಳಿದರು.
ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮಾಪತಿ ಮಾತನಾಡಿ, ಇಂದು ಸಂವಿಧಾನ ಜಾಗೃತಿ ಜಾಥಾ ತಾಲ್ಲೂಕಿಗೆ ಬಂದಿದೆ, ಜಾಥಾದಲ್ಲಿ ತಾಲ್ಲೂಕಿನ ಎಲ್ಲ ಹಂತದ ಅಧಿಕಾರಿಗಳು ಭಾಗವಹಿಸಿದ್ದಾರೆ, ಜನರಿಂದ ಉತ್ತಮ ಸ್ಫಂದನೆ ವ್ಯಕ್ತವಾಗುತ್ತಿದೆ. ಜಾಥಾ ತಾಲೂಕಿನಲ್ಲಿ ಒಂದು ವಾರಗಳ ಕಾಲ ಸಂಚರಿಸಿ ನೆಲಮಂಗಲ ತಾಲ್ಲೂಕಿಗೆ ಹೊರಡಲಿದೆ ಎಂದರು.
ನಂತರ ಮೆಳೆಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದ ಮೂಲಕ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮಸ್ಥರು ಸ್ವಾಗತಿಸಿ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯಹನುಮಣ್ಣ, ಮೆಳೆಕೋಟೆ ಗ್ರಾ.ಪಂ.ಅಧ್ಯಕ್ಷ ಬಿ.ಎನ್ ಶ್ರೀನಿವಾಸ್, ಜೆಡಿಎಸ್ ಮುಖಂಡ ಗೌರಿಶ್, ಕಾಂಗ್ರೆಸ್ ಜಿಲ್ಲಾ ಉಪಾದ್ಯಕ್ಷರಾದ ಎಸ್.ಡಿ ಮುನಿರಾಜು, ಜಾಗೃತಿ ಮತ್ತು ಉಸ್ತುವಾರಿ ಸದಸ್ಯ ರಾಮಣ್ಣ, ಮಂಜುನಾಥ, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಎಲ್ಲಾ ವಾರ್ಡನ್ ಗಳು, ಸ್ವಸಹಾಯ ಸಂಘದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…